ಕವಿತಾಳ: ಗಮೇಸಾ ವಿಂಡ್ ಟರ್ಬೈನ್ ಕಂಪನಿಯ 19 ಹೆಚ್ಚು ಕಾರ್ಮಿಕರನ್ನು ಕಾನೂನು ಬಾಹಿರ ವಾಗಿ ಕೆಲಸದಿಂದ ವಜಾ ಮಾಡಿದ್ದನ್ನು ಖಂಡಿಸಿ ಹಾಗೂ ಪುನರ್ ನೇಮಕ ಮಾಡಿಕೊಳ್ಳಲು ಒತ್ತಾಯಿಸಿ, ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ CITU ನೇತೃತ್ವದಲ್ಲಿ ಕಂಪನಿಯ ಮುಂಭಾಗದಲ್ಲಿ ಕಾರ್ಮಿಕರು ನಡೆಸುತ್ತಿರುವ ಹೋರಾಟವು 32 ನೆಯ ದಿನಕ್ಕೆ ಕಾಲಿಟ್ಟಿದೆ.
ಈ ಹೋರಾಟಕ್ಕೆ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ ಸೇರಿ ಸ್ಥಳಿಯ ಜನ ಪ್ರತಿನಿಧಿಗಳ ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರ, ಗ್ರಾಮಸ್ಥರ ಬೆಂಬಲವು ಇದೆ ಆದರೆ ಕಂಪನಿಯ ಮಾಲೀಕರು ಮಾತ್ರ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ ಕಾರ್ಮಿಕರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಭೂಮಿ, ಗಾಳಿ, ನೀರು ಸೇರಿ ಎಲ್ಲವು ನಮ್ಮದು ಆದರೆ ಕೆಲಸ ಮಾತ್ರ ಪರರಿಗೆ ಕೊಟ್ಟಿದ್ದಾರೆ, ಏಳು ವರ್ಷಗಳ ಕಾಲ ಕಾರ್ಮಿಕರನ್ನು ದುಡಿಸಿಕೊಂಡು ಈಗ ವಜಾ ಗೊಳಿಸಿ ಸ್ಥಳೀಯರಲ್ಲದವರನ್ನು ನೇಮಕ ಮಾಡಿಕೊಂಡಿದ್ದು ಕಾನೂನು ಮತ್ತು ಸಂವಿಧಾನ ವಿರೋಧಿ ನಡೆಯಾಗಿದೆ ಕೂಡಲೇ ಎಚ್ಚೆತ್ತುಕೊಂಡು ಕಾರ್ಮಿಕರನ್ನು ಪುನಃ ಕೆಲಸಕ್ಕೆ ನೇಮಕ ಮಾಡಿಕೊಳ್ಳದಿದ್ದರೆ ಹತ್ತಿರದಲ್ಲೆ ರೈತರ ಮತ್ತು ಗ್ರಾಮಸ್ಥರ, ಜನಪ್ರತಿನಿಧಿಗಳ, ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಬೀಗ ಮುದ್ರೆಯನ್ನು ಹಾಕಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಹೋರಾಟದಲ್ಲಿ ಭಾಗವಹಿಸಿದ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿ ಹೇಳಿದರು.
ನಂತರ ಹೋರಾಟ ವನ್ನು ಉದ್ದೇಶಿಸಿ SFI ಕವಿತಾಳ ನಗರ ಘಟಕದ ಅಧ್ಯಕ್ಷರಾದ ಮೌನೇಶ ಬುಳ್ಳಾಪುರ ಮತ್ತು ಕಾರ್ಮಿಕ ಮುಖಂಡರಾದ ಲಕ್ಷ್ಮಣ್ ಸಿಂಗ್, ಸಿದ್ದರಾಮಯ್ಯ ಮಾತನಾಡಿದರು.
ಈ ಸಂದರ್ಭದಲ್ಲಿ ಕವಿತಾಳ ನಗರ ಘಟಕದ ಕಾರ್ಯದರ್ಶಿ ವೆಂಕಟೇಶ, ಮುಖಂಡರಾದ ನಾಗಮೋಹನ್ ಸಿಂಗ್, ಮಲ್ಲಿಕಾರ್ಜುನ, ಮಹೇಶ್ ಯಡವಲ, ಅರುಣ್ ಕುಮಾರ್ ಹಣಿಗಿ, ಲಿಂಗಣ್ಣ ಹುಸೇನಪುರ, ನಿಂಗಪ್ಪ ನಾಯಕ ತೊಪ್ಪಲದೊಡ್ಡಿ ಸೇರಿದಂತೆ ಕಾರ್ಮಿಕರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…