ಸಾರಿಗೆ ನೌಕರರ ಬೆಂಬಲಿಸಿ ಸಾಮೂಹಿಕ ಸಂಘಟಕರ ಹೋರಾಟ

ಸುರಪುರ: ಮುಷ್ಕರ ನಿರತ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಕಿರುಕುಳ ನೀಡುವುದು ಮತ್ತು ನೊಟೀಸ್ ನೀಡದಂತೆ ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಮುಖಂಡರು ಸುರಪುರ ಬಸ್ ಡಿಪೋ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ.ಸರಕಾರ ಬೇಡಿಕೆ ಈಡೇರಿಸದ ಕಾರಣ ಮುಷ್ಕರಕ್ಕೆ ಮುಂದಾಗಿದ್ದಾರೆ.ಆದ್ದರಿಂದ ಯಾವುದೇ ಸಾರಿಗೆ ನೌಕರರು ಕೆಲಸಕ್ಕೆ ಬರುವಂತೆ ಡಿಪೋ ಅಧಿಕಾರಿಗಳು ಒತ್ತಾಯಿಸಬಾರದು ಎಂದು ಆಗ್ರಹಿಸಿದರು.

ಪಿ.ಹೆಚ್.ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗೆ ಫೆಲೋಶಿಫ್

ಅಲ್ಲದೆ ನಿಮ್ಮಂತೆ ಅವರು ಕೆಲಸ ಮಾಡುತ್ತಾರೆ,ಆದರೆ ಅವರ ಬೇಡಿಕೆಗಳನ್ನು ಸರಕಾರ ಈಡೇರಿಸದೆ ಕಡೆಗಣಿಸಿದ್ದಕ್ಕೆ ಬೇಸತ್ತು ಮುಷ್ಕರಕ್ಕೆ ಮುಂದಾಗಿದ್ದಾರೆ.ತಾವು ಅವರ ಮನೆಗೆ ನೋಟಿಸ್ ಕಳುಹಿಸುವುದು ಮತ್ತು ಮನೆಗಳಿಗೆ ನೋಟಿಸ್ ಅಂಟಿಸುವುದು ಹಾಗು ಮನೆಗಳಿಗೆ ಹೋಗಿ ಕೆಲಸಕ್ಕೆ ಬರದಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಬೆದರಿಸುತ್ತಿರುವುದು ಸರಿಯಲ್ಲ,ಮುಂದೆ ಈ ರೀತಿ ಮಾಡಿದಲ್ಲಿ ಡಿಪೋ ಅಧಿಕಾರಿಗಳ ವಿರುದ್ಧ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.

ನಂತರ ಘಟಕ ವ್ಯವಸ್ಥಾಪಕರಿಗೆ ಬರೆದ ಮನವಿಯನ್ನು ಡಿಪೋ ಮ್ಯಾನೇಜರ ಭದ್ರಪ್ಪ ಅವರಿಗೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ವೆಂಕೋಬ ದೊರೆ ಬೊಮ್ಮನಹಳ್ಳಿ ರಮೇಶ ದೊರೆ ಆಲ್ದಾಳ ವೆಂಕಟೇಶ ಬೇಟೆಗಾರ ದೇವಿಂದ್ರಪ್ಪ ಪತ್ತಾರ ರಾಹುಲ ಹುಲಿಮನಿ ಭೀಮರಾಯ ಸಿಂದಗೇರಿ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ವೀರಭದ್ರಪ್ಪ ತಳವಾರಗೇರಾ ಭೀಮಣ್ಣ ದೀವಳಗುಡ್ಡ ಶರಣಗೌಡ ದೇವಾಪುರ ಶೇಖರ ಮಂಗಳೂರು ಸೇರಿದಂತೆ ಅನೇಕರಿದ್ದರು.

emedialine

Recent Posts

ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿಗೆ ಬಿಳ್ಕೊಡುಗೆ

ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…

4 mins ago

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

10 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420