ಶಹಾಬಾದ: ನೆನೆಗುದಿಗೆ ಬಿದ್ದ ರಸ್ತೆ, ಚರಂಡಿಗಳು, ಎಲ್ಲೆಂದರಲ್ಲಿ ಬೆಳೆದು ನಿಂತ ಕಂಟಿಗಳು, ರಸ್ತೆಯ ಮೇಲೆ ಹರಿಯುವ ಕೊಳಚೆ ನೀರು, ಉದ್ಯಾನವನದಲ್ಲಿ ಹಂದಿಗಳ ವಾಸಸ್ಥಾನ. ಇದು ನಗರದ ಕೊಳಸಾ ಫೈಲ್ ಬಡಾವಣೆಯ ದುಸ್ಥಿತಿ.
ಕಳೆದ ಮೂರು ದಶಕಗಳಿಂದ ಇಲ್ಲಿನ ಜನರು ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿದ್ದಾರೆ.ಹಲವಾರು ಬಾರಿ ವಿವಿಧ ಯೋಜನೆಗಳಲ್ಲಿ ಸಾಕಷ್ಟು ಅನುದಾನ ಬಂದರೂ, ಗುತ್ತಿಗೆದಾರರು ಕಳಪೆ ಕಾಮಗಾರಿ ಕೈಚೆಲ್ಲಿ ಹೋಗಿದ್ದಾರೆ. ಇದಕ್ಕೆ ಇಲ್ಲಿನ ನಗರಸಭೆಯ ಅಧಿಕಾರಿಗಳು ಯಾವುದೇ ಕ್ರಮತೆಗೆದುಕೊಂಡಿಲ್ಲವೆಂಬುದು ಕಹಿ ಸತ್ಯ.
ಇಲ್ಲಿನ ಬಡಾವಣೆಯ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರು ಆದರೆ ಆಸ್ಪತ್ರೆಗೆ ಹೋಗಲು ಯಾವುದೇ ಸರಿಯಾದ ಸಂಪರ್ಕ ರಸ್ತೆಯಿಲ್ಲ. ಹೀಗಾಗಿ ಇಲ್ಲಿನ ಜನರು ಅನೇಕ ಬಾರಿ ಅಧಿಕಾರಿಗಳಿಗೆ, ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.ಇಲ್ಲಿನ ಜನರು ಆಸ್ಪತ್ರೆಗೆ ರೋಗಿಯನ್ನು ತೆಗೆದುಕೊಂಡು ಹೋಗಬೇಕಾದರೆ ರೇಲ್ವೆ ಹಳಿ ದಾಟಿಕೊಂಡು ಹೋಗಬೇಕಾದ ಪ್ರಸಂಗಯಿದೆ.ಅಲ್ಲದೇ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರ ಕಾಮಗಾರಿ ಮಾಡದೇ ಪಲಾಯನ ಮಾಡಿದ್ದಾನೆ. ಈ ಬಗ್ಗೆ ದೂರು ನೀಡಿದರೂ ನಗರಸಭೆಯ ಪೌರಾಯುಕ್ತರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬಡಾವಣೆಯ ಜನರು ಆರೋಪಿಸಿದ್ದಾರೆ.
ಶಾಂತ ಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಉಚಿತ ಕೋವಿಡ್ ಲಸಿಕಾ ಶಿಬಿರ
ನಗರೋತ್ಥಾನ ಮೂರನೇ ಹಂತದ ಯೋಜನೆಯಡಿ ಸುಮಾರು ಲಕ್ಷಗಟ್ಟಲೇ ಅನುದಾನದಲ್ಲಿ ರಸ್ತೆ ನಿರ್ಮಿಸಲು ಗುತ್ತಿಗೆ ನೀಡಲಾಗಿದೆ. ಕಳೆದ ೨ವ?ಗಳಿಂದ ಆರಂಭವಾದ ಕಾಮಗಾರಿ ಮುಕ್ತಾಯ ಕಾಣುತ್ತಿಲ್ಲ. ಎರಡು ವರ್ಷಗಳ ಹಿಂದೆ ಬಡಾವಣೆಯಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ ಎಂಬ ಸುದ್ದಿ ಕೇಳಿ ಜನರು ಬಹಳ ಸಂತೋಷಪಟ್ಟಿದ್ದರು. ಅಲ್ಲದೇ ರಸ್ತೆಯನ್ನು ಸಮತಟ್ಟು ಮಾಡದೇ ಕೇವಲ ಕಂಕರ್ ಹಾಕಿ ಹೋಗಿದ್ದು ಬಿಟ್ಟರೇ ಗುತ್ತಿಗೆದಾರರು ಮತ್ತೆ ಈ ಕಡೆ ತಲೆ ಹಾಕಿಲ್ಲ. ಇದರಿಂದ ರಸ್ತೆ ಸಂಚಾರಕ್ಕೆ ಸಂಚಕಾರವಾಗಿ ಪರಿಣಮಿಸಿದೆ.
ಎರಡು ವರ್ಷದಿಂದ ಕೆಲಸ ಮಾಡದ ಗುತ್ತಿಗೆದಾರನ ವಿರುದ್ಧವೂ ಕ್ರಮಕೈಗೊಳ್ಳುತ್ತಿಲ್ಲ.ಅಲ್ಲದೇ ರಸ್ತೆ ನಿರ್ಮಾಣ ಮಾಡಲು ತಾಕೀತು ಮಾಡುತ್ತಿಲ್ಲ. ಗುತ್ತಿಗೆದಾರನಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ.ಬಡಾವಣೆಯಲ್ಲಿ ಎಲ್ಲೆಂದರಲ್ಲಿ ಕಂಟಿಗಳು ಬೆಳೆದಿವೆ.ಹಂದಿಗಳ ಕಾಟ ಹೆಚ್ಚಾಗಿದೆ. ಕೊಳಚೆ ನೀರು ರಸ್ತೆಯ ಮೇಲೆ ಹರಿದು ಉದ್ಯಾನವನದ ಜಾಗದೊಳಗೆ ಸೇರುತ್ತಿದೆ.ಈ ಬಗ್ಗೆ ದೂರು ಸಲ್ಲಿಸಿದರೂ ಏನು ಪ್ರಯೋಜನವಾಗಿಲ್ಲ. ಇದರಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ. ಈಗಲಾದರೂ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಕಾಮಗಾರಿ ನಿರ್ಮಾಣಕ್ಕೆ ಮುಂದಾಗುವರೇ ಕಾದು ನೋಡಬೇಕಷ್ಟೆ.
ಈಗಾಗಲೇ ಗುತ್ತಿಗೆದಾರನಿಗೆ ಕಾಮಗಾರಿ ಕೈಗೊಳ್ಳಲು ಹಲವಾರು ಬಾರಿ ನೋಟಿಸ್ ನೀಡಲಾಗಿದೆ.ಅಲ್ಲದೇ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದೆ.ಆದರೂ ಗುತ್ತಿಗೆದಾರ ಕಾಮಗಾರಿ ಕೈಗೊಳ್ಳುತ್ತಿಲ್ಲ- ಪುರುಷೋತ್ತಮ ಎಇಇ ನಗರಸಭೆ ಶಹಾಬಾದ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…