ಬಿಸಿ ಬಿಸಿ ಸುದ್ದಿ

ಸಾರಿಗೆ ನೌಕರರ ಮುಷ್ಕರ: ಸರಕಾರ ಉದಾರ ನೀತಿ ತೋರಿಸಬೇಕು: ಲಕ್ಷ್ಮಣ ದಸ್ತಿ

ಕಲಬುರಗಿ : ಪ್ರಸ್ತುತ ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಸಾರಿಗೆ ಮುಷ್ಕರ ಆರಂಭವಾಗಿ ಇಂದಿಗೆ ಹನ್ನೊಂದು ದಿನಗಳು ಗತಿಸಿದರೂ ಸಹ ಸರಕಾರ ಈ ಮುಷ್ಕರಕ್ಕೆ ಗಂಭೀರವಾಗಿ ಪರಿಗಣಿಸಿ ಜನಸಾಮಾನ್ಯರ ಅನುಕೂಲಕ್ಕೆ ಮುಷ್ಕರ ನಿರತ ನೌಕರರ ಬಗ್ಗೆ ಉದಾರ ನೀತಿಯನ್ನು ಅನುಸರಿಸಿ ಅವರ ಜೊತೆ ಮಾತುಕತೆಯ ಮೂಲಕ ಸಮಸ್ಯೆಗೆ ಅಂತ್ಯ ಹಾಡಿ ರಾಜ್ಯಸ ಜನತೆಗೆ ಸಾರಿಗೆ ವ್ಯವಸ್ಥೆಗೆ ಅನುಕೂಲ ಮಾಡಿಕೊಡಬೇಕೆಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ನಾಯಕತ್ವ ವಹಿಸಿರುವ ಚಂದ್ರಶೇಖರ ಕೋಡಿಹಳ್ಳಿಯವರು ಸಹ ನೌಕರರ ಹಿತದೃಷ್ಟಿಯಿಂದ ಪ್ರಸ್ತುತ ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಈ ವಿಷಯಕ್ಕೆ ಸಂಬಂಧಿಸಿ ಪ್ರತಿಷ್ಠೆಯನ್ನು ಬದಿಗೊತ್ತಿ ಸರಕಾರದ ಜೊತೆ ಮಾತುಕತೆಗೆ ಮುಂದಾಗಿ ನೌಕರರ ಬೇಡಿಕೆಗಳನ್ನು ನ್ಯಾಯಯುತವಾಗಿ ಈಡೇರಿಸಿಕೊಡುವ ನಿಟ್ಟಿನಲ್ಲಿ ಆರೋಗ್ಯಕರವಾದ ವಾತಾವರಣ ನಿರ್ಮಿಸಲು ಬದ್ಧತೆ ಪ್ರದರ್ಶಿಸಬೇಕು.

ಬಹುಜನ ಸಮಾಜ ಪಕ್ಷದಿಂದ ಗ್ರಾಮ ಘಟಕದ ಪದಾಧಿಕಾರಿಗಳ ನೇಮಕ

ಸಾರಿಗೆ ನೌಕರರು ಕರ್ನಾಟಕ ರಾಜ್ಯದ ಕೋಟ್ಯಾಂತರ ಜನರ ದಿನವಹಿ ಆಪತ್ಕಾಲಿಕ ಸೇವೆಗೆ ಪೂರಕವಾಗಿರುವುದರಿಂದ ಸಾರ್ವಜನಿಕರ ನೋವಿಗೆ ಕೆಂಗಣ್ಣಾಗದೆ ಪ್ರಸ್ತುತ ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ನೌಕರರು ಪ್ರತಿಷ್ಠೆ ಮತ್ತು ಜಿದ್ದು ಬಿಟ್ಟು ಸರಕಾರದ ಎದುರು ತಮ್ಮ ನಿಲುವನ್ನು ಸ್ಪಷ್ಟಪಡಿಸಿ ಆರೋಗ್ಯಕರವಾದ ಮಾತುಕತೆಯ ಮುಖಾಂತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳಬೇಕೆಂದು ಒತ್ತಾಯಿಸಿದ್ದಾರೆ.

ಸರಕಾರ ಸಾರಿಗೆ ನೌಕರರು ಹಮ್ಮಿಕೊಂಡ ಮುಷ್ಕರದ ಸಂದರ್ಭದಲ್ಲಿ ನೌಕರರ ಮೇಲೆ ಕೈಗೊಂಡ ಎಲ್ಲಾ ಕ್ರಮಗಳನ್ನು ಹಿಂದಕ್ಕೆ ಪಡೆದು ಉದಾರ ಧೋರಣೆಯಂತೆ ಮುಷ್ಕರನಿರತ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಿ, ಜನಸಾಮಾನ್ಯರ ಬದುಕಿಗೆ ನ್ಯಾಯ ಒದಗಿಸಬೇಕು. ನೌಕರರು ತಮ್ಮ ಹಕ್ಕಿಗಾಗಿ ಹೋರಾಟ ಮಾಡುವುದು ಸಂವಿಧಾನಬದ್ಧ ಜನ್ಮ ಸಿದ್ಧ ಹಕ್ಕಾಗಿದೆ. ಇದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಆದರೆ ಪ್ರಸ್ತುತ ಗಂಭೀರ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರಕಾರ ಉದಾರ ನೀತಿ ಅನುಸರಿಸಬೇಕು, ನೌಕರರೂ ಸಹ ಪ್ರತಿಷ್ಠೆಯನ್ನು ಕೈಬಿಟ್ಟು ನಾಡಿನ ಜನತೆಗೆ ಅನುಕೂಲವಾಗುವ ರೀತಿಯಲ್ಲಿ ಸಾರಿಗೆ ಮುಷ್ಕರಕ್ಕೆ ಅಂತ್ಯ ಹಾಡಿ ಜನಸಾಮಾನ್ಯರ ನೋವಿಗೆ ಸ್ಪಂದಿಸಲು ಆಗ್ರಹಿಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago