ಬಿಸಿ ಬಿಸಿ ಸುದ್ದಿ

ಅಗಲಿದ ಹಿರಿಯ ಸಾಹಿತಿಗಳಿಗೆ ನುಡಿನಮನ

ಕಲಬುರಗಿ: ಈ ಭಾಗದ ಹಿರಿಯ ಸಾಹಿತಿಗಳನ್ನು ಕಳೆದುಕೊಂಡು ಕಲ್ಯಾಣ ಕರ್ನಾಟಕ ಬರಡಾಗಿದೆ ಎಂದು ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ಶಿವಪ್ಪಾ ಕಟ್ಟಿಮನಿ ಸುಲ್ತಾನಪೂರ ಹೇಳಿದರು.

ಇಂದು ಸ್ನೇಹ ಸಂಗಮ ವಿವಿಧೊದ್ದೇಶ ಸೇವಾ ಸಂಘದ ವತಿಯಿಂದ ಕೆ.ಹೆಚ್.ಬಿ. ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ಇತ್ತಿಚಿಗೆ ನಮ್ಮನ್ನಗಲಿದ ಹಿರಿಯ ಸಾಹಿತಿಗಳಾದ ಎಲ್.ಬಿ.ಕೆ. ಅಲ್ದಾಳ ಹಾಗೂ ಹೇಮಂತ ಕೋಲ್ಹಾಪೂರ ಅವರಿಗೆ ನುಡಿನಮನ ಅರ್ಪಿಸಿ ಮಾತನಾಡುತ್ತಾ ಹಿಂದುಳಿದ ಭಾಗದಲ್ಲಿನ ಅಪಾರ ಜ್ಞಾನ ಹೊಂದಿರುವ ಇರ್ವರು ರತ್ನಗಳನ್ನು ಕಳೆದುಕೊಂಡಿದ್ದೇವೆ. ಇವರು ಸಾಹಿತ್ಯ, ಕಲೆ, ನಾಟಕ, ಚುಟುಕು ಸಾಹಿತ್ಯಗಳನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಇವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಉತ್ತಮ ರೀತಿಯ ಸಮಾಜ ನಿರ್ಮಿಸೋಣ ಎಂದು ಹೇಳಿದರು.

ಸಂಘದ ಅಧ್ಯಕ್ಷ ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡುತ್ತಾ ಜಾತಿ, ಮತ, ಪಂಥ ಮೀರಿ ಬೆಳೆದ ಮಹಾನ ಸಾಹಿತಿಗಳು. ಇಬ್ಬರು ಸಾಹಿತಿಗಳ ಆಲೋಚನೆ ಒಳ್ಳೆಯ ಸಮಾಜ ನಿರ್ಮಿಸಬೇಕೆಂಬುದೆ ಆಗಿತ್ತು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಸಯ್ಯ ಮಠಪತಿ, ವಿಜಯಕುಮಾರ ಪಾಟೀಲ, ರಾಜು ಚಿತ್ತಾಪೂರ, ಶರಣು ಕಟ್ಟಿಮನಿ, ಶಿವಕುಮಾರ ಬಿರಾದಾರ, ನಿರ್ಮಲಾ ಕಟ್ಟಿಮನಿ, ವಿಠಾಬಾಯಿ ಅಟ್ಟೂರ, ಮಲ್ಲಮ್ಮ ಕಟ್ಟಿಮನಿ, ಪ್ರೇಮಾ ಗಡಾದ, ಸಂದೇಶ ಕಟ್ಟಿಮನಿ, ಸಾಯಬಣ್ಣ ಜಂಬಗಿ, ವಿಜಯಲಕ್ಷ್ಮೀ ಹಿರೇಮಠ ಇತರರು ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago