ಬಿಸಿ ಬಿಸಿ ಸುದ್ದಿ

ಪ್ರಶಸ್ತಿ ಪುರಸ್ಕೃತ ಕರಲಗಿಕರ್‌ಗೆ ಸನ್ಮಾನ

ಕಲಬುರಗಿ: ಭಾರತ ವಿಕಾಸರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಿವಿಲ್ ಇಂಜಿನಿಯರ್ ಮುರಳೀಧರ ಜಿ. ಕರಲಗಿಕರ್ ಅವರನ್ನು ‘ಶ್ರೀರಂಗ ಕನ್‌ಸ್ಟ್ರಕ್ಷನ್ಸ್’ ಕಂಪನಿಯ ನೌಕರರು, ಕಾರ್ಮಿಕರ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕೊರೊನಾ ಹಿನ್ನೆಲೆಯಲ್ಲಿ ನಗರದ ಪೂರ್ಣಾನಂದ ಹೊಟೇಲ್‌ನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಂಪನಿಯ ನೌಕರರು ಕರಲಗಿಕರ್ ಅವರಿಗೆ ಶಾಲು ಹೊದಿಸಿ ಬೃಹತ್ ಹೂಮಾಲೆ ಅರ್ಪಿಸಿ ಸನ್ಮಾನಿಸಿದರು.

ಕೋವಿಡ್ ನಿರ್ವಹಣೆಗಾಗಿ ರಾಜ್ಯಪಾಲ ವಾಜುಭಾಯಿ ವಾಲಾ ತುರ್ತು ಸಭೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರಾಜೇಂದ್ರ ಕರೇಕಲ್, ಚಂದ್ರಶೇಖರ ಹರಸೂರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಮುಂಬಯಿಯ ಕೇಂದ್ರ ರೈಲ್ವೆ ವಲಯ ಬಳಕೆದಾರರ ಸಮಿತಿ (ಝಡ್‌ಆರ್‌ಯುಸಿಸಿ) ಸದಸ್ಯ ವಿಜಯಕುಮಾರ ಹಳಕಟ್ಟಿ, ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರರ ಸಂಘದ ಕಾರ್ಯದರ್ಶಿ ಅನಿಲಕುಮಾರ ಗಂಗಾಣೆ, ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ್ ಕಾಳಗಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ರಾಜೇಂದ್ರ ಕರೇಕಲ್ ಮಾತನಾಡಿ, ‘ಮುರಳಿಧರ ಅವರು ವೃತ್ತಿಯಿಂದ ಸಿವಿಲ್ ಇಂಜಿನಿಯರರಾಗಿದ್ದರೂ ಸಮಾಜ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ, ಜನಪರ ಕಾಳಜಿಯುಳ್ಳವರಾಗಿದ್ದು ಸಹಾಯ ಕೇಳಿ ತಮ್ಮ ಬಳಿಗೆ ಬಂದವರಿಗೆ ನೆರವು ನೀಡುತ್ತಾ ಎಲ್ಲರ ಮನಗೆದ್ದಿದ್ದಾರೆ, ಅವರ ಸೇವೆ, ಸಾಧನೆ ಗುರುತಿಸಿ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಿರುವುದು ಹೆಚ್ಚಿನ ಖುಷಿ ನೀಡಿದೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಶಸ್ತಿ, ಪುರಸ್ಕಾರ, ಸ್ಥಾನಮಾನ ಲಭಿಸಲಿ’ ಎಂದು ಹಾರೈಸಿದರು.

ಇಸ್ಲಾ‌ಂ ಮತ್ತು ಅಂಬೇಡ್ಕರ್ ಬಗೆಗೆ ಸೂಲಿಬೆಲೆ ಸುಳ್ಳುಗಳು

ಇಂಜಿನಿಯರರಾದ ವಿಶ್ವನಾಥ ಗುಬ್ಬೇವಾಡ, ಅಂಬರೀಷ ಪಾಟೀಲ್, ರಾಜಶೇಖರ ಉಪ್ಪಿನ್, ಅನಿಲ್ ಮುದಾಳೆ ಮತ್ತಿತರರು ಪಾಲ್ಗೊಂಡಿದ್ದರು. ಕಾರ್ಮಿಕ ಗುತ್ತೇದಾರರಾದ ಸಂಜೀವಕುಮಾರ ಶಿಂಧೆ, ಹನುಮಂತ ಆಮ್ಟೇಕರ್, ಸುಭಾಷ ಮಾವನೂರಕರ್, ಸಾಗರ್, ಉದಯ, ಪಂಡಿತ ಕೊರಳ್ಳಿ, ರತನ್ ನಿಂಬಾಳಕರ್, ಮೊಹ್ಮದ್ ನಿಜಾಮುದ್ದಿನ್, ಇಬ್ರಾಹಿಂ ಮತ್ತಿತರರು ಇದ್ದರು. ಸಿವಿಲ್ ಇಂಜಿನಿಯರ್ ರುದ್ರಮುನಿ ಪುರಾಣಿಕ ನಿರೂಪಿಸಿ ವಂದಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago