ಬಿಸಿ ಬಿಸಿ ಸುದ್ದಿ

27 ರಂದು ಸಿ.ಜಿ.ಕೆ. ಬೀದಿರಂಗ ದಿನ, ರಂಗ ಪುರಸ್ಕಾರ ಕಾರ್ಯಕ್ರಮ

ಕಲಬುರಗಿ: ಕನ್ನಡದ ಹೆಸರಾಂತ ರಂಗಕರ್ಮಿ ಸಿ.ಜಿ.ಕೆ.ಯವರ ಜನ್ಮ ದಿನದ ನಿಮಿತ್ತ ಜೂನ್ 27 ರಂದು ಸಿ.ಜಿ.ಕೆ. ಬೀದಿರಂಗ ದಿನವನ್ನಾಗಿ ನಗರದ ಕನ್ನಡ ಭವನದಲ್ಲಿ ಸಂಜೆ 5.00ಕ್ಕೆ ಆಚರಣೆ ಮಾಡಲಾಗುತ್ತದೆ ಎಂದು ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆಯ ಕಾರ್ಯದರ್ಶಿ ನಯನಾ ಬಿ. ಅವರು ತಿಳಿಸಿದ್ದಾರೆ.

ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಸಿ.ಜಿ.ಕೆ.ಯವರ ಜನ್ಮ ದಿನದ ಆಚರಿಸಲಾಗುತ್ತದ್ದು, ಸಿ.ಜಿ.ಕೆ.ಯವರ ರಂಗಪ್ರಜ್ಞೆಯನ್ನು ಬಲ್ಲ ಗೆಳೆಯರು, ರಂಗಕರ್ಮಿಗಳು, ಸಂಘಟನೆಗಳು ಅವರ ಹುಟ್ಟುಹಬ್ಬದ ದಿನದಂದು ಪಾಲ್ಗೊಂಡು, ಸಮಾನ ಮನಸ್ಕರಾದ ಜನರೊಂದಿಗೆ ಬೆರೆತು ಕಾರ್ಯಕ್ರಮದ ಮೂಲಕ ಈ ಜಿಲ್ಲೆಯಲ್ಲಿ ಸಾಂಸ್ಕೃತಿಕವಾಗಿ ಗುರುತಿಸಿಕೊಂಡ ಕಲಾವಿದರಿಗೆ ಸಿ.ಜಿ.ಕೆ. ರಂಗ ಪುರಸ್ಕಾರ ನೀಡಲಾಗುವುದು ಎಂದರು.

ಹೊಸ ಸವಾಲುಗಳನ್ನು ಚರ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಸಾಲಿನ ಸಿ.ಜಿ.ಕೆ. ರಂಗ ಪುರಸ್ಕಾರವನ್ನು ಖ್ಯಾತ ನಾಟಕಕಾರ ಮತ್ತು ಕಥೆಗಾರ ಮಹಾಂತೇಶ ನವಲಕಲ್ ಅವರಿಗೆ ನೀಡಲಾಗುವದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ರಂಗಕರ್ಮಿಗಳು ಮತ್ತು ಎನ್.ವಿ. ಡಿಗ್ರಿ ಕಾಲೇಜಿನ ಪ್ರಾಚಾರ್ಯರಾದ ಡಾ. ಹೇಮಂತಕುಮಾರ ಎಸ್. ಕೊಲ್ಲಾಪೂರ ವಹಿಸುವರು. ಸಾಹಿತಿ ಮತ್ತು ಪತ್ರಕರ್ತ ಮಹಿಪಾಲರೆಡ್ಡಿ ಮೂನ್ನೂರು ಮತ್ತು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಸಂದೀಪ ಬಿ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಡಾ. ಪರಶುರಾಮ ಪಿ. ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಕಲಬುರಗಿಯ ಹಿರಿಯ ರಂಗ ಕಲಾವಿದರಾದ ಸಂಗಯ್ಯ ಹಳ್ಳದಮಠ ಅವರು ರಂಗಗೀತೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

20 mins ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

38 mins ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

54 mins ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

2 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

2 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

2 hours ago