ಸುರಪುರ: ರಾಜ್ಯದಲ್ಲಿ ಕೊರೊನಾ ಮಹಾ ಮಾರಿ ಹೆಚ್ಚಳದಿಂದಾಗಿ ಸರಕಾರ ಅನೇಕ ನಿಯಮಗಳನ್ನು ಜಾರಿಗೊಳಿಸಿದೆ,ಅದರಂತೆ ಸುರಪುರ ನಗರದಲ್ಲಿನ ತರಕಾರಿ ಮಾರಾಟದ ಸ್ಥಳವನ್ನು ಬದಲಾವಣೆ ಮಾಡಲಾಗಿದ್ದು ಇದನ್ನು ವಿರೋಧಿಸಿ ತರಕಾರಿ ಮತ್ತು ಹಣ್ಣು ಮಾರಾಟಗಾರರು ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಸ್ಥಳಾಂತರ ಮಾಡದಂತೆ ಒತ್ತಾಯಿಸಿದರು.
ನಗರದಲ್ಲಿನ ನಗರಸಭೆ ಕಚೇರಿ ಮುಂದೆ ಜಮಾಯಿಸಿದ ಅನೇಕ ಜನ ಬೀದಿ ಬದಿಯ ವ್ಯಾಪಾರಿಗಳು ನಗರಸಭೆ ಅಧಿಕಾರಿಗಳ ವಿರುಧ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆ ಯಾವುದೇ ಅಧಿಕಾರಿಗಳು ಇವರ ಕೂಗು ಕೇಳಿಸಿಕೊಳ್ಳದಿದ್ದಾಗ ರಸ್ತೆ ತಡೆಯನ್ನು ನಡೆಸಿದರು.
ಪೂಜ್ಯ ಶ್ರೀ ಬಸವರಾಜಪ್ಪ ದೊಡ್ಡಪ್ಪ ಅಪ್ಪ ಅವರ ಶ್ರದ್ಧಾಂಜಲಿ
ಈ ಸಂದರ್ಭದಲ್ಲಿ ಮಾತನಾಡಿದ ಬೀದಿಬದಿ ವ್ಯಾಪಾರಿಯಾದ ಲಕ್ಷ್ಮೀ ಹುಜರತಿ, ಕರೋನಾ ವೈರಸ್ ಎಲ್ಲರನ್ನೂ ಭಯಭೀತಗೊಳಿಸಿರುವುದು ನಿಜ. ಬೀದಿಬದಿಯಲ್ಲಿ ಕುಳಿತು ವ್ಯಾಪಾರ ಮಾಡುವವರಿಂದಲೇ ಕೊರೋನಾ ಹಬ್ಬುತ್ತದೆ ಎನ್ನುವುದು ಎಷ್ಟರಮಟ್ಟಿಗೆ ಸರಿ. ವಿವಾಹ, ಸಭೆ, ಸಮಾರಂಭಗಳಿಂದ ಬರುವುದಿಲ್ಲವೇ ಎಂದು ಪ್ರಶ್ನಿಸಿದ ಅವರು ನಾವು ತರಕಾರಿ ಮಾರುವ ಜಾಗಕ್ಕೆ ಗ್ರಾಹಕರು ಹುಡುಕಿಕೊಂಡು ಬರುತ್ತಾರೆ. ಏಕಾಏಕಿ ಸ್ಥಳ ಬದಲಾವಣೆ ಮಾಡಿದರೆ ಗ್ರಾಹಕರು ಬಾರದಂತಾಗಿ ವ್ಯಾಪಾರಸ್ಥರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ನಗರಸಭೆಯಿಂದ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಮಾರುವ ಪ್ರದೇಶದಿಂದ ಪ್ರಭು ಕಾಲೇಜು ಮೈದಾನದಲ್ಲಿ ತರಕಾರಿ ಇಟ್ಟರೆ ಅಲ್ಲಿಗೆ ಯಾರು ಬರುವುದಿಲ್ಲ. ಅಲ್ಲದೆ ಉಳಿದ ತರಕಾರಿಯನ್ನು ಮನೆಗೆ ತರಲು, ಮತ್ತೆ ಇಲ್ಲಿಂದ ಮೈದಾನಕ್ಕೆ ಹೋಗಲು ಆಟೋಕ್ಕೆ ೧೪೦ ರೂ. ನೀಡಬೇಕಿದೆ. ಇಡೀ ದಿನ ಮಾರಿದರೆ ೨೦೦ ರೂ. ಉಳಿಯಲ್ಲ. ಅಂತಹುದರಲ್ಲಿ ಆಟೋಕ್ಕೆ ದುಡಿಯಬೇಕಿದೆ. ಮೈದಾನದಲ್ಲಿ ಯಾವುದೇ ಸೌಲಭ್ಯವಿಲ್ಲ. ಗ್ರಾಹಕರು ಮೈದಾನಕ್ಕೆ ಬರಲು ಹಿಂದೇಟು ಹಾಕುತ್ತಾರೆ. ನಾವು ಇರುವ ಜಾಗದಲ್ಲಿಯೇ ಕೊವೀಡ್ ನಿಯಮ ಪಾಲಿಸಿ ವ್ಯಾಪಾರ ಮಾಡುತ್ತೇವೆ. ಇದಕ್ಕೆ ನಗರಸಭೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
ಅಗ್ನಿಶಾಮನ ಕುರಿತು ಕರಪತ್ರ ಹಂಚಿ ಜಾಗೃತಿ ಜಾಗೃತಿ
ಪ್ರತಿಭಟನಾ ನಿರತರೊಂದಿಗೆ ನಗರಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ ಮಾತನಾಡಿ, ೨ ದಿನದವರೆಗೆ ನೀವು ಯಾವ ಜಾಗದಲ್ಲಿ ವ್ಯಾಪಾರ ಮಾಡುತ್ತೀರೋ ಅಲ್ಲಿಯೇ ಮಾಡಿ. ಪೌರಾಯುಕ್ತರು ಬಂದ ನಂತರ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಕಡ್ಡಾಯವಾಗಿ ಎಲ್ಲಾ ವ್ಯಾಪಾರಿಗಳು ಕರೋನಾ ನಿಯಮವಾಳಿಗಳನ್ನು ಪಾಲಿಸಬೇಕು ಹಾಗೂ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು. ನಿಯಮ ಮೀರಿದರೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.
ಪಿಐ ಸಾಹೇಬಗೌಡ ಎಂ. ಪಾಟೀಲ್, ಬಿಜೆಪಿ ಮುಖಂಡ ವೇಣುಗೋಪಾಲನಾಯಕ ಜೇವರ್ಗಿ, ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ, ೧೦೦ಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಸ್ಥರು ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…