ಕಲಬುರಗಿ: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕೆ ಏಪ್ರಿಲ್ 21 ರಿಂದ ಮೇ 4ರ ವರೆಗೆ ರಾತ್ರಿ ಕಫ್ರ್ಯೂ ಮತ್ತು ವಾರಂತ್ಯ ಕಫ್ರ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 22 ರಿಂದ ಏ.30ರ ವರೆಗೆ ನಡೆಯಬೇಕಿದ್ದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಪರೀಕ್ಷಾ ದಿನಾಂಕಗಳನ್ನು ನಂತರ ಆಯೋಗದ ಅಂತರ್ಜಾಲ ® http://kpsc.kar.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.