ಸುರಪುರ: ನಗರದಲ್ಲಿ ಏಕಾಎಕಿ ಎಲ್ಲಾ ವ್ಯಾಪಾರಗಳನ್ನು ಬಂದ್ಗೊಳಿಸಿದ್ದನ್ನು ಪ್ರಶ್ನಿಸಿ ವರ್ತಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅನೇಕ ಜನ ವರ್ತಕರು,ಸರಕಾರದ ಆದೇಶದ ಹೆಸರಿನಲ್ಲಿ ನಗರಸಭೆಯ ಅಧಿಕಾರಿಗಳು ವಿನಾಃಕಾರಣ ವರ್ತಕರಿಗೆ ತೊಂದರೆ ನೀಡುತ್ತಿದ್ದಾರೆ.ರಾತ್ರಿ ಕರ್ಫ್ಯೂಗೆ ನಾವೆಲ್ಲರು ಬದ್ಧರಾಗಿದ್ದೇವೆ,ಆದರೆ ಬೆಳಗಾಗುವುದೊರಳಗೆ ಸರಕಾರದ ಆದೇಶವಿದೆ ಎಂದು ಅಂಗಡಿಗಳನ್ನು ಮುಚ್ಚಿಸಲಾಗುತ್ತಿದೆ,ಇದರಿಂದ ಎಲ್ಲಾ ವ್ಯಾಪಾರಿಗಳು ಸಮಸ್ಯೆಪಡಬೇಕಾಗುತ್ತದೆ.ಮದ್ಹ್ಯಾನದ ವರೆಗಾದರು ಅವಕಾಶ ಮಾಡಿ.ಈಗ ಹಬ್ಬ ಮದುವೆ ಸೀಜನ್ ಇದೆ ಇಂತಹ ಸಂದರ್ಭದಲ್ಲಿ ವ್ಯಾಪಾರ ಬಂದ್ ಮಾಡಿಸಿದಲ್ಲಿ ನಮ್ಮೆಲ್ಲರ ಬದುಕಿಗೆ ಸಮಸ್ಯೆಯಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಗತ್ಯ ವಸ್ತುಗಳ ಮಾರಾಟ: ಇತರೆ ವ್ಯಾಪಾರ ಬಂದ್
ನಂತರ ಸ್ಥಳಕ್ಕೆ ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಹಾಗು ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್ ಅವರು ಮಾತನಾಡಿ,ಈ ಆದೇಶ ಕೇವಲ ಸುರಪುರಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕಿದೆ ಆದ್ದರಿಂದ ಎಲ್ಲರು ಪಾಲಿಸಲೆಬೇಕಿದೆ.ನಗರದಲ್ಲಿನ ಅಗತ್ಯ ವಸ್ತುಗಳ ಮಾರಾಟವನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸಲು ಸರಕಾರದ ಆದೇಶ ಪಾಲಸುವಂತೆ ತಿಳಿಸಿದರು,ಅಲ್ಲದೆ ನೀವು ಬೇಕಾದರೆ ಮನವಿಯನ್ನು ಸಲ್ಲಿಸಿ ಅದನ್ನು ಜಿಲ್ಲಾಧಿಕಾರಿಗಳಿಗೆ ನಿಮ್ಮ ಮನವಿ ಕಳುಹಿಸಲಾಗುವುದು ಎಂದು ಮನವರಿಕೆ ಮಾಡಿದ ನಂತರ ಪ್ರತಿಭಟನೆಯನ್ನು ನಿಲ್ಲಿಸಲಾಯಿತು.
ಸುರಪುರ ಬಸ್ ಡಿಪೋ ಮುಂದೆ ಸಾಮೂಹಿಕ ಸಂಘಟನೆಗಳ ಪ್ರತಿಭಟನೆ
ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಸೇರಿದಂತೆ ಅನೇಕ ಜನ ವರ್ತಕರು ಭಾಗವಹಿಸಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…