ಬೆಂಗಳೂರು: ಕೋವಿಡ್-19 ರೋಗಿಗಳಿಗೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆಯಡಿಯಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ.
• ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ಸಿ.ಹೆಚ್.ಬಿ.ಎಂ.ಎಸ್ ಪೋರ್ಟಲ್ ಮೂಲಕ ಹಾಗೂ ಇತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ.
• ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಅನ್ನು ಉಚಿತವಾಗಿ ಒದಗಿಸಲಾಗುತ್ತದೆ.
• ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಸರ್ಕಾರವು ನಿಗಧಿಪಡಿಸಿರುವ ಈ ಕೆಳಕಂಡ ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ.
ಜನರಲ್ ವಾರ್ಡ್, ರೂ. 10000/- ಹೆಚ್ಡಿಯು, ರೂ. 12000/-, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ, ರೂ. 15000/- ಐಸೊಲೇಷನ್ ಐಸಿಯು ವೆಂಟಿಲೇಟರ್ ಸಹಿತ, ರೂ. 25000/-
• ಒಂದೊಮ್ಮೆ ಖಾಸಗಿ ಆಸ್ಪತ್ರೆಗಳು ಕೋವಿಡ್ 19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗಧಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ 1800 425 8330 ಗೆ ಹಾಗೂ 1912 ಗೆ ಕರೆ ಮಾಡಿ ದೂರು ನೀಡಬಹುದು
• sastgrievance@gmail.com ಗೆ ಇಮೇಲ್ ಮೂಲಕ ದೂರು ಸಲ್ಲಿಸಬಹುದು ಹಾಗೂ 08022536200 ಗೆ ಕರೆ ಮಾಡಬಹುದು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…