ಸುರಪುರ: ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡು ತಾಲೂಕಿನ ಆಲ್ದಾಳ ಗ್ರಾಮ ಪಂಚಾಯತಿಯ ಅಭಿವೃಧ್ಧಿ ಅಧಿಕಾರಿ ರಾಜಕುಮಾರ ನಾಯಕ ಅವರಿಗೆ ಸನ್ಮಾನಿಸಲಾಯಿತು.
ನಗರದ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ದಲಿತ ಸೇನೆ ತಾಲೂಕು ಅಧ್ಯಕ್ಷ ನಿಂಗಣ್ಣ ಗೋನಾಲ ಮತ್ತಿತರೆ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಕೊರೊನಾ ನಿರ್ಮೂಲನೆಗೆ ಉಪವಾಸ ಮಾಡಿ ಪ್ರಾರ್ಥಿಸಿದ ಅನ್ವರ ಜಮಾದಾರ್
ಈ ಸಂದರ್ಭದಲ್ಲಿ ಮಾತನಾಡಿದ ನಿಂಗಣ್ಣ ಗೋನಾಲ,ರಾಜ್ಯದಲ್ಲಿಯೇ ಉದ್ಯೋಗ ಖಾತ್ರಿ ಸಮರ್ಪಕ ಜಾರಿಗೊಳಿಸುವ ಜೊತೆಗೆ ಆಲ್ದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಲಿಕಾರರಿಗೆ ೧೫೦ ದಿನಗಳ ಕೆಲಸ ನೀಡುವ ಮೂಲಕ ಕಾರ್ಮಿಕರಲ್ಲಿಯೂ ಸಂತಸ ಮೂಡಿಸಿದ ರಾಜಕುಮಾರವರು ರಾಜ್ಯದಲ್ಲಿಯೇ ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ರಾಜ್ಯ ಪ್ರಶಸ್ತಿಗೆ ಭಾಜನಾರಾಗಿರುವುದು ನಮ್ಮ ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.ಇನ್ನೂ ಹೆಚ್ಚೆಚ್ಚು ಪ್ರಶಸ್ತಿಗಳು ಲಭಿಸುವ ನಿಟ್ಟಿನಲ್ಲಿ ಅವರ ಸೇವೆ ಮುಂದುವರೆಯಲಿ ಎಂದು ಈ ಮೂಲಕ ಹಾರೈಸುವುದಾಗಿ ತಿಳಿಸಿದರು.
ಜೇವರ್ಗಿ 4 ಕಡೆ ಕರೋನಾ ಹೆಲ್ಪ್ ಡೆಸ್ಕ್ ಸ್ಥಾಪನೆ: ವಿನಯ್ ಕುಮಾರ್ ಪಾಟೀಲ್
ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಸಿಬ್ಬಂದಿಗಳಾದ ವೆಂಕೋಬ ಬಾಕ್ಲಿ ಮತ್ತಿತರರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭಲ್ಲಿ ಮುಖಂಡರಾದ ಶಿವಣ್ಣ ನಾಗರಾಳ ನಾಗರಾಜ ಗೋಗಿಕೇರಾ ಬನ್ನಪ್ಪ ಕೋನಾಳ ಶಿವರುದ್ರ ಬೋನಾಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…