ಕೊರೊನಾ ಆರ್ಭಟ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆಗೆ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ 2 ರೂಪಾಂತರ ಸೋಂಕು ಬಹು ಬೇಗ ಹರಡುತ್ತಿದೆ. ಇದರಿಂದ ದಿನ ನಿತ್ಯ ಸಾವುಗಳು ಸಂಭವಿಸುತ್ತಿದ್ದು, ಸಕಾಲಕ್ಕೆ ಚಿಕಿತ್ಸೆ ನೀಡಿ ಮರಣ ಸಂಖ್ಯೆ ತಡೆಗಟ್ಟಬೇಕು ಮತ್ತು ಆರೋಗ್ಯ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಬೇಕು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ರಾಜ್ಯವು ಸೇರಿದಂತೆ ಜಿಲ್ಲಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚು ಪತ್ತೆಯಾಗುತ್ತಿವೆ.ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕೊರೊನಾ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರಕದೆ ಸಾವು ಸಂಭವಿಸುತ್ತಿವೆ.ಇನ್ನು ಹಲವಾರು ರೋಗಿಗಳಿಗೆ ಹಾಸಿಗೆ, ಆಮ್ಲಜನಕ ಸಿಗದೆ ಪ್ರಾಣಬಿಟ್ಟ ಸಂಖ್ಯೆಗಳು ಹೆಚ್ಚುತ್ತಿವೆ.ರೆಂಡೆಸಿವಿರ್ ಔಷಧಿ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಇನ್ನೋಂದೆಡೆ ಸೋಂಕಿತರಿಗೆ ಸರಿಯಾದ ಉಪಚಾರ ಮಾಡುತ್ತಿಲ್ಲ.ಜಿಲ್ಲಾಂದ್ಯಂತ ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ.ಹಾಸಿಗೆ ಪಡೆಯಲು ಜನರು .ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ.ಕೂಡಲೇ ಜಿಲ್ಲಾಡಳಿತ ಕಲಬುರಗಿ ನಗರದಲ್ಲಿ 10 ಸಾವಿರ ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಶೆಡ್ ಆಸ್ಪತ್ರೆ ನಿರ್ಮಾಣ ಮಾಡಬೇಕು.

ವೀಕೆಂಡ್ ಕರ್ಪ್ಯೂ: ಸುಖಾಸುಮ್ಮನೆ ತಿರುಗುತ್ತಿದ್ದವರಿಗೆ ಪೊಲೀಸರಿಂದ ದಂಡ

ಈ ಬಾರಿ ಯುವಕರು,ವಯಸ್ಕರು ಹಾಗೂ ಸಕ್ಕರೆ ಕಾಯಿಲೆ,ಅಧೀಕ ರಕ್ತದೊತ್ತಡ ಹೀಗೆ ಹಲವಾರು ಸೋಂಕಿತ ರೋಗಿಗಳಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ.ತುರ್ತು ಸಂದರ್ಭದಲ್ಲಿ ಕೂಡ ಸೋಂಕಿತರನ್ನು ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಸಾವುಗಳು ಸಂಭವಿಸುತ್ತಿವೆ.ಸರಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಹೀಗಾದರೆ ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ.ಇಲ್ಲಿ ಕೇಂದ್ರ ಸರ್ಕಾರ ನೀಡಿರುವ ಕೊವೀಡ ಚಿಕಿತ್ಸೆ ದರಪಟ್ಟಿ ಗಾಳಿಗೆ ತೂರಿ ಮನಬಂದಂತೆ ಹಣ ಪಡೆಯುತ್ತಿದ್ದಾರೆ.ಜಿಲ್ಲಾಡಳಿತ ಹಾಗೂ ಸರಕಾರ ಕಣ್ಣು ಮುಚ್ಚಿಕೊಂಡು ಕುಳಿತಿದೆ.

ಕೊರೊನಾ 2 ನೇ ವೈರಸ್ ದಿಂದ ಜನರು ತತ್ತರಿಸಿ ಹೋಗಿದ್ದಾರೆ.ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆ ಪಡೆಯಲು ಜನರು ತಮ್ಮ ಜಮೀನು, ಮನೆಗಳನ್ನು ಮಾರಿಕೊಳ್ಳುತ್ತಿದ್ದಾರೆ.ಕಲವೋಂದು ಪ್ರಕರಣಗಳಲ್ಲಿ ಹಣ ಸುರಿದರೂ ಜೀವ ಉಳಿಸಿಕೊಳ್ಳದೆ ನೋವು ಅನುಭವಿಸುತ್ತಿದ್ದಾರೆ.ಇದಕ್ಕೆಲ್ಲಾ ಸರಕಾರದ ವಿಫಲ ನೀತಿ ಹಾಗೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಧೋರಣೆಯೆ ಕಾರಣ.ಇನ್ನಾದರು ಜಿಲ್ಲಾಧಿಕಾರಿಗಳು ಸಕಾಲಕ್ಕೆ ಚಿಕಿತ್ಸೆ ಕೊಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಆರೋಗ್ಯ ವೈದ್ಯಕೀಯ ತುರ್ತು ಪರಿಸ್ಥಿತಿ ಎಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

1 hour ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

4 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

9 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

11 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420