ಕಲಬುರಗಿ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಇತರ ತಡೆಗೆ ಜಿಲ್ಲಾಡಳಿತದಿಂದ ಹಲವು ಕ್ರಮ ಮುಂಜಾಗ್ರತೆ ವಹಿಸಲಾಗುತಿದೆ. ಈ ಹಿನ್ನೆಲೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ PWD ಭವನಕ್ಕೆ ಸಂಸದ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಈ ನೂತನ ಭವನ ಬಳಸಿಕೊಳಬಹುದೆಂದು ಸಂಸದ ಡಾ. ಉಮೇಶ್ ಜಾಧವ್ ಮತ್ತು ಜಿಲ್ಲಾಡಳಿತಕ್ಕೆ ಸಲಹೆ ನೀಡಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ, ಶಾಸಕ ದತ್ತಾತ್ರೇಯ ಸಿ ಪಾಟೀಲ ರೇವೂರ್, ಶಾಸಕ ಡಾ. ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿಜಿ ಪಾಟೀಲ್ ಸೇರಿದಂತೆ ಹಲವರು ಇದ್ದರು.