ಕಲಬುರಗಿ: ಕೊರೊನಾ ರೂಪಾಂತರ ೨ನೇ ಅಲೆ ಎಲ್ಲೆಡೆ ವ್ಯಾಪಿಸಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅನೇಕ ಸಾವುಗಳು ಸಂಭವಿಸುವುದನ್ನು ನೋಡುತ್ತಿದ್ದೇವೆ. ಈ ದಿಸೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಬಳಗ ಜಿಲ್ಲಾ ಘಟಕದ ಆಶ್ರಯದಲ್ಲಿ ಆರೋಗ್ಯ ಕುರಿತಾಗಿ ಆನ್ಲೈನ್ ಕವಿಗೋಷ್ಠಿ ಸ್ಪರ್ದೆ ಏರ್ಪಡಿಸಲಾಗಿತ್ತು.
ಘಟಕದ ಜಿಲ್ಲಾದ್ಯಕ್ಷ ಮಹಾಂತೇಶ ಎನ್ ಪಾಟೀಲ ಯಾತನೂರ ಅವರ ನೇತೃತ್ವದಲ್ಲಿ ’ಆರೋಗ್ಯ’ ಎಂಬ ಶಿರ್ಷಿಕೆಯಡಿ ಆಯೋಜಿಸಿದ ಕವಿಗೋಷ್ಠಿಯಲ್ಲಿ ಜಿಲ್ಲೆಯ ಅನೇಕ ಯುವ ಕವಿಗಳು, ಹಿರಿಯರು ಭಾಗವಹಿಸಿದರು. ಇವರಲ್ಲಿ ಅತ್ಯುತ್ತಮ ಮೂರು ಕವನಗಳನ್ನು ಆಯ್ಕೆ ಮಾಡಲಾಗಿದೆ. ಹಾಗೂ ಮೂರು ಮೆಚ್ಚುಗೆ ಕವನಗಳೆಂದು ಆಯ್ಕೆ ಮಾಡಲಾಗಿದೆ.
ಶಿಕ್ಷಕಿ ಮಹಾದೇವಿ ಅಷ್ಠಗಿ(ಪ್ರಥಮ), ಸಂಗಮ್ಮ ದರ್ಮುರಕರ (ದ್ವಿತೀಯ) ಹಾಗೂ ವಿಜಯಲಕ್ಮೀ ಗುತ್ತೇದಾರ(ತೃತೀಯ) ಸ್ಥಾನಗಳಿಗೆ ಆಯ್ಕೆಯಾದರು.
ಹಾಗೂ ಗಂಗಮ್ಮ ನಾಲವಾರ, ಭಾರತಿ ಗುತ್ತೇದಾರ, ರವಿಕುಮಾರ ನಂದಗೇರಿ ಅವರ ಕವನಗಳು ತೀರ್ಪುಗಾರರ ಮೆಚ್ಚುಗೆ ಪಡೆದವು. ಶಿಕ್ಷಕಿ ಮಲ್ಲಮ್ಮ ಎಸ್ ಕಾಳಗಿ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದರು. ೨೫ ಜನ ಕವಿಗಳು ಭಾಗವಹಿಸಿದರು. ಇವರ ಎಲ್ಲಾ ಕವನಗಳು ಅರ್ಥಪೂರ್ಣವಾಗಿದ್ದವು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…