ಸುರಪುರ: ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದ ರಾಜ್ಯದಲ್ಲಿ ಲಾಕ್ಡೌನ್ ಘೋಷಣೆಯಾಗಿದ್ದರಿಂದ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ವಾಪಸ್ಸಾದರು.
ಬೆಂಗಳೂರಲ್ಲಿ ಕೋವಿಡ್ ಹೆಚ್ಚುತ್ತಿರುವ ಕಾರಣದಿಂದ ಬೆಂಗಳೂರಿನಿಂದ ಬರುತ್ತಿರುವ ಎಲ್ಲಾ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ನಡೆಸಲು ಮುಂದಾದ ತಾಲೂಕು ಆಡಳಿತ ಹಾಗು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ನಗರದ ಬಸ್ ನಿಲ್ದಾಣದಲ್ಲಿ ಬಸ್ನಲ್ಲಿ ಆಗಮಿಸಿದ ಎಲ್ಲಾ ಕಾರ್ಮಿಕರಿಗೆ ಕೊರೊನಾ ಪರೀಕ್ಷೆ ನಡೆಸಿದರು.ಅಲ್ಲದೆ ಪ್ರತಿಯೊಬ್ಬರು ಮನೆಗೆ ಹೋದ ನಂತರ ಕನಿಷ್ಟ ಒಂದು ವಾರಗಳ ಕಾಲ ಮನೆಯಲ್ಲಿಯೆ ಇರುವಂತೆ ಸಲಹೆ ನೀಡಲಾಯಿತು.ಅಲ್ಲದೆ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರಾದಲ್ಲಿ ತಕ್ಷಣಕ್ಕೆ ಸರಕಾರಿ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಲಾಯಿತು.
ಈ ಸಂದರ್ಭಲ್ಲಿ ಕಂದಾಯ ಇಲಾಖೆಯ ಪ್ರದೀಪ ನಾಲ್ವಡೆ ಸೇರಿದಂತೆ ಆರೋಗ್ಯ ಇಲಾಖೆಯ ಅನೇಕ ಸಿಬ್ಬಂದಿಗಳಿದ್ದರು.