ಕೆಎಚ್ ಬಿ ಕ್ಷೇಮಾಭಿವೃದ್ಧಿ ಸಂಘದಿಂದ ಕೊರೊನಾ ವಿರುದ್ಧ ಜಾಗೃತಿ

ಕಲಬುರಗಿ: ಸರ್ವರು ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವುದರೊಂದಿಗೆ ಮುಂಜಾಗ್ರತೆ ವಹಿಸಿ ಆರೋಗ್ಯವಂತ ಸಮಾಜ ನಿರ್ಮಿಸಬೇಕೆಂದು ಬಡಾವಣೆಯ ಹಿರಿಯರಾದ ನಾಗೇಂದ್ರಪ್ಪ ದಂಡೋತಿಕರ್ ಹೇಳಿದರು.

ಕೆಎಚ್ ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ಕೆಎಚ್ ಬಿ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಾಣಿಕೇಶ್ವರಿ ನಗರ ಆರೋಗ್ಯ ಕೇಂದ್ರದ  ವತಿಯಿಂದ ಕರೋನ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರೋಗ ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಮುಂಜಾಗ್ರತೆ ವಹಿಸುವುದು ಒಳ್ಳೆಯದು ಏಕೆಂದರೆ ಈಗ ನಾವೆಲ್ಲರೂ ಬಹಳ ಗಂಭೀರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದೇವೆ  ಕರೋನದ  ಅಲೆಯು ಅತಿ ತೀವ್ರತೆ ಹೊಂದಿದ್ದು ಅದರಿಂದ ತಪ್ಪಿಸಿಕೊಳ್ಳಲು ಅದನ್ನು ನಿರ್ಲಕ್ಷ್ಯ ಮಾಡದೆ ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು.  ಮಾಸ್ಕ್ ಹಾಕಿಕೊಳ್ಳುವುದರೊಂದಿಗೆ,ಆಗಾಗ  ಸ್ಯಾನಿಟೈಸರ್  ಬಳಸಿ, ದೈಹಿಕ ಅಂತರ ಕಾಪಾಡಿಕೊಂಡು ಜೀವನ ಸಾಗಿಸಬೇಕು ಎಂದು ಹೇಳಿದರು.

ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದ ವಿಶ್ವ ಗುರು ಭಾರತದ ಬಗ್ಗೆ ನಿಮಗೆ ಗೊತ್ತಾ?

ಸಂಘದ ಅಧ್ಯಕ್ಷರಾದ ಸಂಜೀವಕೂಮಾರ ಶೆಟ್ಟಿ,  ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ,  ಶ್ರೀನಿವಾಸ ಬುಜ್ಜಿ, ಬಸವರಾಜ ಹೆಳವರ ಯಾಳಗಿ,ಬಾಲಕೃಷ್ಣ ಕುಲಕರ್ಣಿ, ಡಿ ವಿ ಕುಲಕರ್ಣಿ,  ನಾಗರಾಜ  ವಡ್ಡಣಕೇರಿ, ಪುಂಡಲೀಕ ಜಮಾದರ, ವಿನೋದ ಪಡನೂರ, ವೀರೇಶ ಬೋಳಶೆಟ್ಟಿ, ನ್ಯಾಯವಾದಿ ಜ್ಯೋತಿ ಲಕ್ಷ್ಮೀ ಶೆಟ್ಟಿ,ರಾಮದಾಸ ಪಾಟೀಲ, ರವೀಂದ್ರ ಗುತ್ತೆದಾರ, ದಿಲೀಪ ಬಕ್ರೆ,    ಬಸವರಾಜ ಹೊದಲೂರ,  ಮಲ್ಲಿಕಾರ್ಜುನ್ ಮಲ್ಲೆದ,ಪ್ರದೀಪ್ ಕುಂಬಾರ, ಕೆ.ಎಮ. ಲೋಕಯ್ಯ  ಪ್ರಕಾಶ ಕುಲಕರ್ಣಿ, ಕವಿ ಅರಸನ,ಶಿವಾನಂದ  ಬುಜರೆ,ಡಾ॥ ಚೇತನ ಕುಲಕರ್ಣಿ, ಡಾ. ಪ್ರಭುಲಿಂಗ ಮಾನಕರ್, ಕಿರಿಯ  ಆರೋಗ್ಯ ಸಹಾಯಕಿಯರಾದ ಸುಧಾರಾಣಿ ಪಂಚಾಳ, ಮೀರಾಬಾಯಿ ಬೆಳಮಗಿ, ಆಶಾ ಕಾರ್ಯಕರ್ತೆಯಾದ ಲಕ್ಷ್ಮಿ ಮುಗಳಿ ಹಾಗೂ  ಬಡಾವಣೆಯ ಹಲವಾರು ಜನ ಭಾಗವಹಿಸಿ ಸುಮಾರು 150 ಜನರಿಗೆ  ವ್ಯಾಕ್ಸಿನ್ ಹಾಕಲಾಯಿತು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

49 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420