ಶಾಸಕ ಪ್ರಿಯಾಂಕ್ ಖರ್ಗೆ ಬಗ್ಗೆ ಮಾತನಾಡುವ ಯೋಗ್ಯತೆ ಅರವಿಂದ ಚವ್ಹಾಣ್ ಗೆ ಇಲ್ಲಾ: ಸಿದ್ದುಗೌಡ

ಚಿತ್ತಾಪುರ: ಮಾಜಿ ಸಚಿವರು,ಜನಪ್ರಿಯ ಶಾಸಕ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡುವ ಯೋಗ್ಯತೆ ಜಿ.ಪಂ.ಸದಸ್ಯ ಅರವಿಂದ ಚವ್ಹಾಣ್ ರವರಿಗೆ ಇಲ್ಲಾ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿದ್ದುಗೌಡ. ಜಿ.ಅಫಜಲಪುರಕರ ಅವರು ಅರವಿಂದ ಚವ್ಹಾಣ್ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆ ಅವರು ಕರೋನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುದಿದ್ದಾರೆ. ಚಿತ್ತಾಪುರನಲ್ಲಿ ಜಿಲ್ಲೆಗೆ ಮಾದರಿಯಾಗುವಂತ ಕೋವಿಡ್ ಸೆಂಟರನ್ನು ಸ್ಥಾಪನೆ ಮಾಡಿ ಅದಕ್ಕೆ ಬೇಕಾಗುವ ಎಲ್ಲಾ ಸೌಕರ್ಯಗಳನ್ನು ಒದಗಿಸಿದ್ದಾರೆ.ಸರ್ಕಾರದ ಮೇಲೆ ಅವಲಂಬಿತವಾಗದೆ ಕ್ಷೇತ್ರದ ಜನರ ಆರೋಗ್ಯದ ಹಿತಾದೃಷ್ಟಿಯಿಂದ ತಮ್ಮ ಸ್ವಂತ ಖರ್ಚಿನಲ್ಲಿ 100 ಬೆಡ್ (ಹಾಸಿಗೆಗಳು) ವ್ಯವಸ್ಥೆ ಮಾಡಿ ಸುವ್ಯವಸ್ಥೆವಾದ ಕೋವಿಡ್ ಸೆಂಟರನ್ನು ಪ್ರಾರಂಭ ಮಾಡಿದ್ದಾರೆ ಎಂದು ತಿಳಿಸಿದರು.

ಕೋವಿಡ್ ರೋಗಿಗೆ ಚಿಕಿತ್ಸೆ ನೀಡಲು ಹಿಂದೇಟು: ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು

ಕರೋನಾದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾವು ಉಂಟಾಗುತ್ತಿವೆ ಎಂದು ಅರಿತ ಶಾಸಕರು ಕ್ಷೇತ್ರದ ತುಂಬಾ ತಿರುಗಾಡಿ ಜನರಲ್ಲಿ ಕರೋನಾ ಮಾಹಾಮಾರಿಯ ಬಗ್ಗೆ ಜಾಗೃತಿ ಮೂಡಿಸುವಂತ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ,ಕ್ಷೇತ್ರದ ಜನತೆಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.ಜನರಲ್ಲಿ ಕರೋನಾದ ಅರಿವು ಮೂಡಿಸುವಂತಹ ಕಾರ್ಯ ನಿರಂತರವಾಗಿ ಮಾಡುತ್ತಿದ್ದಾರೆ.

ಅಲ್ಲದೆ ಕ್ಷೇತ್ರದ ಜನತೆ, ಪಕ್ಷದ ಮುಖಂಡರಿಗೂ,ತಾಲೂಕ ಪಂಚಾಯತ್,ಜಿಲ್ಲಾ ಪಂಚಾಯತ್, ಪುರಸಭೆ,ಎ.ಪಿ.ಎಮ್.ಸಿ ಚುನಾಯಿತ ಸದಸ್ಯರೊಳಗೊಂಡು ಅವರು ಇವರು ಅಂತಾ ಪಕ್ಷಭೇದ ಮರೆತು ಎಲ್ಲರೂ ಲಸಿಕೆಯನ್ನು ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಚಿವರಿಗೆ ಮನವಿ

ಶಾಸಕ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮಾತನಾಡುವ ನೈತಿಕತೆ ಅರವಿಂದ ಚವ್ಹಾಣ್ ಅವರಿಗೆ ಇಲ್ಲಾ,ಇಂತಹ ಇಕ್ಕಟ್ಟಿನ ಸಂದರ್ಭದಲ್ಲಿ ಬಿಜೆಪಿ ಸಂಸದರು,ಶಾಸಕರು ಏನು ಮಾಡುತ್ತಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

emedialine

Recent Posts

ಕೃಷಿ ಇಲಾಖೆ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ಸುರಪುರ: ನಮ್ಮ ಸರಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ಜೊರಿಗೊಳಿಸಿದ್ದು ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ಶಾಸಕ…

55 seconds ago

ವಿದ್ಯಾರ್ಥಿನಿಯರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಸೈಕಲ್‍ ವಿತರಣೆ

ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…

7 mins ago

ಕಲಬುರಗಿಯಲ್ಲಿ ರೈತರ ಜಿಲ್ಲಾ ಸಮಾವೇಶ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…

9 mins ago

ಪ್ರಶಾಂತ ಡಿ ಜಾನಕರ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…

13 mins ago

ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿಗೆ ಬಿಳ್ಕೊಡುಗೆ

ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…

17 mins ago

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

24 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420