ಕೊರೊನಾ ಕುರಿತು ಯಾವುದೇ ಸಮಸ್ಯೆ ಇದ್ದಲ್ಲಿ ಅಧಿಕಾರಿಗಳ ಸಂಪರ್ಕಿಸಿ: ರಾಜುಗೌಡ

ಸುರಪುರ: ರೆಮ್ಡಿ ಸಿವಿರ್ ಸೇರಿದಂತೆ ಕೊರೊನಾಗೆ ಸಂಬಂಧಿಸಿದಂತೆ ಏನೆ ಸಮಸ್ಯೆ ಇದ್ದಲ್ಲಿ ಜನರು ನಮ್ಮನ್ನಾಗಲಿ ಅಥವಾ ಅಧಿಕಾರಿಗಳನ್ನಾಗಲಿ ಸಂಪರ್ಕಿಸುವಂತೆ ಶಾಸಕ ನರಸಿಂಹ ನಾಯಕ (ರಾಜುಗೌಡ) ತಿಳಿಸಿದರು.

ನಗರದ ತಹಸೀಲ್ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಮೊದಲಿಗಿಂತಲು ಈಬಾರಿಯ ಸೊಂಕು ತುಂಬಾ ವೇಗವಾಗಿ ಹರಡುತ್ತಿದ್ದು ಜನರು ತುಂಬಾ ಎಚ್ಚರಿಕೆಯನ್ನು ವಹಿಸುವಂತೆ ಹಾಗು ಅನಾವಶ್ಯಕವಾಗಿ ಹೊರಗೆ ಬಾರದೆ ಮನೆಯಲ್ಲಿಯೆ ಇರುವಂತೆ ಹಾಗು ಹೊರಗೆ ಬಂದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು.ಅಲ್ಲದೆ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗು ಸಲಹೆ ನೀಡಿ ಯಾವುದೇ ಕೋವಿಡ್ ಕುರಿತು ಜನರು ಸಂಪರ್ಕಿಸಿದಲ್ಲಿ ಅವರಿಗೆ ಸಕಾಲಕ್ಕೆ ಸ್ಪಂಧಿಸುವಂತೆ ಹಾಗು ಆಸ್ಪತ್ರೆಗಳಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರುವಂತೆ ತಿಳಿಸಿದರು.

ಕೋವಿಡ್ ಕೇರ್ ಸೆಂಟರ್‌ಗೆ ಶಾಸಕ ರಾಜುಗೌಡ ಭೇಟಿ

ನಂತರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ಈಗಾಗಲೇ ಎರಡು ಕೋವಿಡ್ ಕೇರ್ ಸೆಂಟರ್‌ಗಳ ತಯಾರಿ ಮಾಡಿಕೊಂಡಿದ್ದು ೧೭೦ ಹಾಸಿಗೆಗಳನ್ನು ಸಿದ್ಧ ಪಡಿಸಲಾಗಿದೆ ಅಲ್ಲದೆ ತಾಲೂಕಿನ ಬಂಡೊಳ್ಳಿ ಹಾಗು ಮಲ್ಲಾ ಬಿ ಗ್ರಾಮದಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದ್ದು ಹೊರ ರಾಜ್ಯಗಳಿಂದ ಬರುವವರ ಕೋವಿಡ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಹಾಗು ಬೆಂಗಳೂರು ಭಾಗದಿಂದ ಬಂದ ಜನರನ್ನು ೨೭ ಮತ್ತು ೨೮ ನೇ ತಾರೀಖು ಎರಡು ದಿನಗಳ ಕಾಲ ಕವಡಿಮಟ್ಟಿ ಕೃಷಿ ಸಂಶೋಧನಾ ಕೇಂದ್ರದ ಬಳಿ ಕೋವಿಡ್ ಪರೀಕ್ಷೆಯನ್ನು ನಡೆಸಿ ಸುರಪುರ ಶಹಾಪು ಮತ್ತು ಯಾದಗಿರಿ ತಾಲೂಕಿನ ಜನರಿಗೆ ಮನೆಯಲ್ಲಿ ಇರುವಂತೆ ಸಲಹೆ ನೀಡಿರುವುದಾಗಿ ತಿಳಿಸಿದರು.

ಕೋವಿಡ್ ರೋಗಿಗೆ ಚಿಕಿತ್ಸೆ ನೀಡಲು ಹಿಂದೇಟು: ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು

ನಂತರ ಹುಣಸಗಿ ತಹಸೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ್ ಹಾಗು ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ತಾಲೂಕು ಪಂಚಾಯತಿ ಇಒ ಅಂಬ್ರೇಶ ಸೇರಿದಂತೆ ಆರೋಗ್ಯ ಇಲಾಖೆ ಹಾಗು ಕಕ್ಕೇರಾ ಕೆಂಭಾವಿ ವಲಯಗಳ ಉಪ ತಹಸೀಲ್ದಾರರು ಮತ್ತು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಕಕ್ಕೇರಾ ಪುರಸಭೆ ಮುಖ್ಯಾಧಿಕಾರಿ ಓಂಕಾರೆಪ್ಪ ಪೂಜಾರಿ ಹುಣಸಗಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಅರುಣಕುಮಾರ ಚವ್ಹಾಣ ಸೇರಿದಂತೆ ವಿವಿಧ ಅಧಿಕಾರಿಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಸಭೆಯಲ್ಲಿ ವೈದ್ಯಾಧಿಕಾರಿ ಹರ್ಷವರ್ಧನ ರಫಗಾರ ಹುಣಸಗಿ ತಾಲೂಕು ಪಂಚಾಯತಿಯ ಶರಣಗೌಡ ಕೆಂಭಾವಿ ಪುರಸಭೆಯ ಪ್ರಕಾಶ ಬಾಗ್ಲಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420