ರಾಜ್ಯ ಮಟ್ಟದ ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿಗೆ ಲಕ್ಷ್ಮೀಕಾಂತ ಕುಲಕರ್ಣಿ ಆಯ್ಕೆ

0
92

ಯಾದಗಿರಿ: ಜಿಲ್ಲೆಯ ಜಿಲ್ಲಾ ವರದಿಗಾರರಾದ ಲಕ್ಷ್ಮೀಕಾಂತ ಕುಲಕರ್ಣಿ ಅವರನ್ನು ರಾಜ್ಯ ಮಟ್ಟದ ಹೂಗಾರ್ ಸ್ಮಾರಕ ಮಾಧ್ಯಮ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ  ಎಂದು ಪತ್ರಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ  ಮಹೇಶ್ ಬಾಬು ಸುರ್ವೇ ತಿಳಿಸಿದ್ದಾರೆ.

ಬೆಂಗಳೂರಿನ  ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 1 ರಂದು ಸಾಯಂಕಾಲ 6 ಗಂಟೆಗೆ ಪತ್ರಕರ್ತರ ವೇದಿಕೆ ಹಾಗೂ ಬೆಂಗಳೂರು ಕರ್ನಾಟಕ ನ್ಯೂಸ್ ಸೆಂಟರ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

Contact Your\'s Advertisement; 9902492681

ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಲಕ್ಷ್ಮಿಕಾಂತ ಕುಲಕರ್ಣಿ ಅವರು ಕ್ರಿಯಾಶೀಲರಾಗಿ ಸುಮಾರು ವರ್ಷಗಳಿಂದ ವಿಜಯವಾಣಿ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಇವರ  ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದರು .

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 1 ರಂದು  ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ  ಮಠಾಧೀಶರು, ರಾಜಕೀಯ, ಧುರೀಣರು, ಮಾಧ್ಯಮ ಹಿರಿಯ  ಮಿತ್ರರು, ಪ್ರಗತಿಪರ ಚಿಂತಕರು, ಸಾಹಿತಿಗಳು ಭಾಗವಹಿಸಿ ಈ ಪ್ರಶಸ್ತಿಯನ್ನು  ಪ್ರದಾನ ಮಾಡಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here