ಬಿಸಿ ಬಿಸಿ ಸುದ್ದಿ

ಫ್ಲೆಕ್ಸ್ ಪ್ರಕರಣ: ವಿಶ್ವನಾಥ್ ವಿಷಾದ

ಬೆಂಗಳೂರು: ಗಿಂಡೇನಹಳ್ಳಿ ಅಂತ್ಯಕ್ರಿಯೆ ಜಾಗದ ವಿಚಾರದಲ್ಲಿ ಫ್ಲೆಕ್ಸ್ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ.

ಸುತ್ತಲೂ ಕಲ್ಲು ಬಂಡೆ ಇರುವ ಜಾಗವದು. ಅಲ್ಲಿ ಕುಡಿಯುವ ನೀರು ಮತ್ತಿತರೆ ಮೂಲಸೌಕರ್ಯಗಳು ಇಲ್ಲದ ಕಾರಣ ಅಲ್ಲಿಗೆ ಶವಸಂಸ್ಕಾರಕ್ಕೆ ಬರುವ ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕುಡಿಯುವ ನೀರು ಮತ್ತು ಆಹಾರ ಪೂರೈಕೆ ಮಾಡುವಂತೆ ಮಾನವೀಯ ಮತ್ತು ಸಾಮಾಜಿಕ ಕಳಕಳಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ನನ್ನ ಫೋಟೋ ಹಾಕಿ ಫ್ಲೆಕ್ಸ್ ಹಾಕಿರುವುದು ಸರಿಯಾದ ಕ್ರಮವಲ್ಲ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಫ್ಲೆಕ್ಸ್ ಹಾಕಿದ್ದರ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಶವಸಂಸ್ಕಾರ ಮಾಡುವ ಸ್ಥಳದಲ್ಲಿ ಅಥವಾ ಅದರ ವಿಚಾರದಲ್ಲಿ ರಾಜಕಾರಣ ಮಾಡುವ ವ್ಯಕ್ತಿತ್ವ ನನ್ನದಲ್ಲ. ಅದರ ಅಗತ್ಯವೂ ನನಗಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರು ಪರಿಸ್ಥಿತಿಯ ಅರಿವಿಲ್ಲದೇ ನನ್ನ ಗಮನಕ್ಕೆ ತಾರದೇ ಇಂತಹ ಅಚಾತುರ್ಯ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಇದು ಸೇವೆ ಮಾಡುವ ಸಂದರ್ಭ. ಈ ವಿಚಾರದಲ್ಲಿ ಪ್ರಚಾರ ಪಡೆಯುವುದು ಸಲ್ಲದು. ನನ್ನ ಗುರಿ ನಮ್ಮ ಕ್ಷೇತ್ರದ ಗ್ರಾಮಗಳು ಮತ್ತು ಇಡೀ ಕ್ಷೇತ್ರ ಕೋವಿಡ್ ಮುಕ್ತವಾಗಬೇಕೆಂಬುದಾಗಿದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರ್ಯಕರ್ತರೂ ಸಹ ಹಗಲಿರುಳೂ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಯಾವ ಕಾರ್ಯಕರ್ತರೂ ಈ ಸೇವೆಯ ವಿಚಾರದಲ್ಲಿ ಯಾವುದೇ ಪ್ರಚಾರ ಪಡೆಯಲು ಮುಂದಾಗಬಾರದು ಎಂದು ಮನವಿ ಮಾಡಿದ ಅವರು, ಸಾವಿನ ಮನೆಯಲ್ಲಿ ಪ್ರಚಾರ ಪಡೆಯಬೇಕೆಂಬ ಉದ್ದೇಶ ನಮ್ಮದಲ್ಲ ಎಂದು ತಿಳಿಸಿದರು.

ಈ ವಿಚಾರ ತಿಳಿದ ತಕ್ಷಣ ಫ್ಲೆಕ್ಸ್ ಅನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ಯಾರೂ ಸಹ ಅನ್ಯಥಾ ಟೀಕೆ ಟಿಪ್ಪಣೆ ಮಾಡದೇ ನಮ್ಮ ಕ್ಷೇತ್ರವನ್ನು ಮತ್ತು ರಾಜ್ಯವನ್ನು ಕೋವಿಡ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಸಲಹೆ ಸೂಚನೆ ಮತ್ತು ಮಾರ್ಗದರ್ಶನ ನೀಡಬೇಕೆಂದು ಮನವಿ ಮಾಡಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago