ಕಲಬುರಗಿ: ಆಕ್ಸಿಜನ್ ಇಲ್ಲದೇ ಪ್ರತಿದಿನ ಜಿಲ್ಲೆಯಲ್ಲಿ ಕುಟುಂಬಸ್ಥರು ತನ್ನ ಅಪ್ತರನ್ನು ಕಳೇದುಕೊಳುತ್ತಿರುವುದು ಸಾಮಾನ್ಯವಾಗುತ್ತಿದ್ದು, ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಇಲ್ಲದೇ ವೈದ್ಯರು ಅಸಹಾಯಕರಾಗಿದ್ದಾರೆ.
ಆದರೆ ಜಿಲ್ಲೆಯ ನಂದೂರ ಆಕ್ಸಿಜನ್ ಉತ್ಪಾದಕ ಕಂಪನಿಯಾದ ಕುಶಲ್ ಮಹೇತಾ ಅವರ ವಿಜಯ ಆಕ್ಸಿಜನ್ ಇಂಡಸ್ಟ್ರಿ ಗ್ಯಾಸ್ ನೇರ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತೆಲಂಗಾಣದ ರಾಜ್ಯಗಳಿಗೆ ರೂ.400 ಆಕ್ಸಿಜನ್ ಸಿಲಿಂಡರ್ ನ್ನು ರೂ. 1500ಗೆ ಬ್ಲಾಕ್ ಲ್ಲಿ ಮಾರಾಟ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ.
ಇತ್ತೀಚಿಗೆ ನಗರದ ಕೆಬಿಎನ್ ಆಸ್ಪತ್ರೆಯ 2 ಮತ್ತು ನಿನ್ನೆ ಸುದ್ದಿ ಮೂಲಗಳ ಪ್ರಕಾರ ಸಂತೋಷ ಕಾಲೋನಿಯ ಖಾಸಗಿ ಆಸ್ಪತ್ರೆಯಲ್ಲಿ 2 ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಬಗ್ಗೆ ಮೃತ ಕುಟುಂಬದ ಸದಸ್ಯರು ಅರೋಪಿಸಿದ್ದು, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಸಾವುಗಳಿಗೆ ಆಕ್ಸಿಜನ್ ಕೊರತೆ ಇಲ್ಲ ಎಂದು ಹೇಳುತ್ತಿದೆ.
ಮೇಲ್ನೋಟಕ್ಕೆ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಮೇಲ್ನೋಟಕ್ಕೆ ಎದು ಕಾಣುತ್ತಿದ್ದು, ಬ್ಲಾಕ್ ಲ್ಲಿ ಆಕ್ಸಿಜನ್ ಸಿಲಿಂಡರ್ ದುಬಾರಿ ಬೆಲೆಯಲ್ಲಿ ಮಾರಾಟ ಮಾಡುವುದಕ್ಕೆ ಜಿಲ್ಲಾಡಳಿತವೇ ಮೌನ ವಹಿಸಿದಂತಾಗಿದೆ.
ಜಿಲ್ಲೆಯಲ್ಲಿ ಆಸ್ಪತ್ರೆಗಳು ಈ ದುಬಾರಿ ಬೆಲೆಯಲ್ಲಿ ಆಕ್ಸಿಜನ್ ಖರೀದಿಸಲು ಸಾಧ್ಯವಾಗದೇ, ನಗರದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಅಭಾವದ ಉಂಟಾಗುತ್ತಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರರಾದ ರಿಯಾಜ್ ಖತೀಬ್ ಮಾಹಿತಿ ನೀಡಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…