ಸೇಡಂ: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 24 ಜನ ರೋಗಿಗಳು ಸಾವನಪ್ಪಿರುವುದು ಇದಕ್ಕೆಲ್ಲ ರಾಜ್ಯ ಬಿಜೆಪಿ ಸರಕಾರವೇ ನೇರ ಹೋಣೆ ಆಗಿದೆ ಎಂದು ಸೇಡಂ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ದೂರಿದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ ಕೊರತೆ ಇದ್ದರೆ ರೋಗಿಗಳನ್ನು ಒಳರೋಗಿಗಳನ್ನಾಗಿ ಏಕೆ ಸೇರಿಸಿಕೊಳ್ಳಲಾಗಿದೆ.
ರೋಗಿಗಳಿಗೆ ಆಸ್ಪತ್ರೆಯಲ್ಲಿ ಸೇರಿಸಿಕೊಂಡ ನಂತರ ಆ ರೋಗಿಯ ಎಲ್ಲಾ ಚಿಕಿತ್ಸೆ ವ್ಯವಸ್ಥೆ ಮಾಡಿಕೊಳ್ಳುವುದು ಅಲ್ಲಿನ ಆಸ್ಪತ್ರೆ ವೈದ್ಯರ ಜವಾಬ್ದಾರಿಯಾಗಿದೆ ರಾಜ್ಯದಲ್ಲಿ ಇಷ್ಟೊಂದು ಭಯಾನಕ ಪರಿಸ್ಥಿತಿಯಲ್ಲಿ ಮುಂಜಾಗ್ರತೆ ಮಾಡಿಕೊಳ್ಳದ ಬಿಜೆಪಿ ಸರಕಾರದ ವಿಫಲತೆಯಿಂದಾಗಿ ಅಮಾಯಕ ಬಡ 24 ರೋಗಿಗಳು ತಮ್ಮ ಜೀವವನ್ನೇ ಕಳೆದುಕೊಳ್ಳಬೇಕಾಯಿತು.
ಸರಕಾರ ಕೂಡಲೇ ಮೃತಪಟ್ಟಿರುವ ಪ್ರತಿಯೊಬ್ಬ ರೋಗಿಗಳ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡಬೇಕು ಹಾಗೂ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಬಗ್ಗೆ ಕೂಡಲೇ ತನಿಖೆ ಮಾಡಿ ತಪ್ಪಿಸ್ಥರಿಗೆ ಶೀಕ್ಷೆ ನೀಡಬೇಕು ಎಂದು ಬಾಲರಾಜ್ ಗುತ್ತೆದಾರ ಒತ್ತಾಯಿಸಿದ್ದಾರೆ.
ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…
ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…