ಸುರಪುರ: ತಾಲೂಕಿನ ತಿಂಥಣಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರು ಕೊರೊನಾ ಟಾಸ್ಕ್ಫೋರ್ಸ್ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರರು, ಗ್ರಾಮೀಣ ಪ್ರದೇಶದಲ್ಲಿ ಗುಳೆ ಹೋಗಿ ಬಂದಿರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಳ್ಳುವಂತೆ ತಿಳಿಸಿ,ಅಲ್ಲದೆ ಯಾವುದೇ ಕಾರಣಕ್ಕೂ ತಾವು ಜನರ ತುಂಬಾ ಹತ್ತಿರಕ್ಕೆ ಹೋಗಿ ಮಾತನಾಡುವಂತಹದ್ದು, ಅಲ್ಲದೆ ಅವರನ್ನು ಮುಟ್ಟಿ ಮಾತನಾಡಿಸುವುದನ್ನು ಮಾಡಬೇಡಿ,ಅಂತರವನ್ನು ಕಾಯ್ದುಕೊಂಡು ಅವರಿಗೆ ಸಲಹೆ ನೀಡುವಂತೆ ತಿಳಿಸಿದರು.
ಕೋವಿಡ್ ಸಂಕಷ್ಟ:ಸರ್ಕಾರದ ಜೊತೆ ಕೈಜೋಡಿಸಲು ಸಂಸದ ಡಾ. ಉಮೇಶ್ ಜಾಧವ್ ಮನವಿ
ಪ್ರತಿ ಮನೆಗಳಿಗೂ ಭೇಟಿ ನೀಡಿ ಯಾರೂ ಅನಾವಶ್ಯಕವಾಗಿ ಹೊರಗೆ ಬಾರದಂತೆ ತಿಳಿಸಿ ಜೊತೆಗೆ ಹೊರಗೆ ಬಂದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮತ್ತು ಅನಾವಶ್ಯಕವಾಗಿ ಜನರು ಗುಂಪು ಸೇರದಂತೆ ಮತ್ತು ಯಾವುದೇ ಸಭೆ ಸಮಾರಂಭಗಳನ್ನು ನಡೆಸದಂತೆ ಅರಿವು ಮೂಡಿಸಿ.ಮತ್ತು ಮದುವೆಯಂತಹ ಕಾರ್ಯಕ್ರಮವಿದ್ದಲ್ಲಿ ಕಡ್ಡಾಯವಾಗಿ ಪರವಾನಿಗೆಯನ್ನು ಪಡೆಯಬೇಕು ಮತ್ತು ನೂರಕ್ಕಿಂತ ಹೆಚ್ಚು ಜನ ಸೇರದಂತೆ ತಿಳುವಳಿಕೆ ಮೂಡಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಉಪ ತಹಸೀಲ್ದಾರ್ ರೇವಪ್ಪ ತೆಗ್ಗಿನಮನಿ ಪೊಲೀಸ್ ಸಿಬ್ಬಂದಿಗಳಾದ ಸಿದ್ಧಾರೂಢ ಹನುಮಂತ ಬೋಯಿ ವಿಎ ಶಿವಕುಮಾರ ಮುಖಂಡರಾದ ವೆಂಕಟೇಶ ಗಂಗಾಧರ ನಾಯಕ ಅಯ್ಯಪ್ಪ ನಾಯಕ ಮಲ್ಲಪ್ಪ ಕುರ್ಲಿ ಬಸವರಾಜ ಎರಡೋಣಿ ಶ್ರೀಮಾನ್ಗೌಡ ದಳಪತಿ ಸೇರಿದಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…