ಸೇಡಂ: ರಾಜ್ಯ ಮಟ್ಟದ ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿಗೆ ಈ ವರ್ಷ ಕಲಬುರಗಿ ಜಿಲ್ಲೆಯಿಂದ ಉದಯವಾಣಿ ಪತ್ರಕರ್ತ ಶಿವಕುಮಾರ ಭೀ. ನಿಡಗುಂದಾ ಆಯ್ಕೆಯಾಗಿದ್ದಾರೆ ಎಂದು ಪತ್ರಕರ್ತರ ವೇದಿಕೆ ರಾಜ್ಯಾಧ್ಯಕ್ಷ ಮಹೇಶ ಬಾಬು ಸುರವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಸೇವೆ ಸಲ್ಲಿಸುವ ಪತ್ರಕರ್ತರರಿಗೆ ಪ್ರತಿ ವರ್ಷ ಪ್ರತಿ ಜಿಲ್ಲೆಯಿಂದ ಆಯ್ಕೆ ಮಾಡಿ ಪ್ರಶಸ್ತಿ ಪ್ರದಾನ ಮಾಡುತ್ತಾ ಬಂದಿದ್ದು, ಈ ವರ್ಷ ಕಲಬುರಗಿ ಜಿಲ್ಲೆಯಿಂದ ಶಿವಕುಮಾರ ಅವರನ್ನು ಆಯ್ಕೆ ಮಾಡಲಾಗಿದ್ದು, ಪತ್ರಕರ್ತರ ವೇದಿಕೆ ಬೆಂಗಳೂರು ಮತ್ತು ಕರ್ನಾಟಕ ಮೀಡಿಯಾ ಮತ್ತು ನ್ಯೂಸ್ ಸೆಂಟರ್ ಸಹಯೋಗದಲ್ಲಿ ಜುಲೈ ೧ ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಪರಿಚಯ: ಶಿವಕುಮಾರ ನಿಡಗುಂದಾ ಮೂಲತಃ ಸೇಡಂ ನಿವಾಸಿಯಾಗಿದ್ದು, ೧೧ ವರ್ಷಗಳಿಂದ ಪತ್ರಿಕಾ ಸೇವೆಯಲ್ಲಿ ತೊಡಗಿದ್ದಾರೆ. ಸತ್ಯಕಾಮ, ಗ್ರಿನೋಬಲ್ಸ್, ಕರ್ಮವಾಣಿ, ಹಲೋ ಬೆಂಗಳೂರು, ಸಾಕ್ಷಿ (ತೆಲುಗು ದಿನಪತ್ರಿಕೆ), ಸಂಧ್ಯಾಕಾಲ, ಪ್ರಜಾವಾಣಿ, ವಿಜಯ ಕರ್ನಾಟಕ ಪತ್ರಿಕೆಗಳಿಗೆ ವರದಿಗಾರನಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಉದಯವಾಣಿಯ ಸೇಡಂ ತಾಲೂಕು ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಎರಡು ಅವಧಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ, ಪ್ರಸ್ತುತ ಅಧ್ಯಕ್ಷರಾಗಿ ಪತ್ರಕರ್ತರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…