ಬಿಸಿ ಬಿಸಿ ಸುದ್ದಿ

ವೈಯಕ್ತಿಕ ಶೌಚಾಲಯ ಯೋಜನೆಯಲ್ಲಿ ಅವ್ಯವಹಾರ: ಪಾಲಿಕೆ ಮುಂದೆ ಪ್ರತಿಭಟನೆ

ಕಲಬುರಗಿ: ಮಹಾನಗರ ಪಾಲಿಕೆಯ ವತಿಯಿಂದ ವೈಯಕ್ತಿಕ ಶೌಚಾಲಯ ಯೋಜನೆಯಡಿ ಶೇಕಡಾ 22.75ರಷ್ಟು ಅಡಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಗಳವಾರ ಜೈ ಕನ್ನಡಿಗರ ಸೇನೆಯ ಕಾರ್ಯಕರ್ತರು ಮಹಾನಗರ ಪಾಲಿಕೆಯ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.

ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಎಸ್. ಭಾಸಗಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಗನ್ನಾಥ್ ಸೂರ್ಯವಂಶಿ, ರಾಮಾ ಪೂಜಾರಿ, ಅಮರ್ ಯಾದವ್, ಸಂತೋಷ್ ಹಾವನೂರ್, ಸಂಜೀವಕುಮಾರ್ ಮಾಳಗಿ, ನವೀನ್ ಸಿ.ಪಿ., ರಾಣೋಜಿ ಜಾನಯ್ಯ, ಶೀಲಾ, ಮಾಲಾ (ಮಂಗಳಮುಖಿಯರು), ಸುಂದರ್ ಬೈರಾಮಡಗಿ, ರವಿ ಸಾಹುಕಾರ್, ವಿಠಲರಾವ್ ಸುಗಂಧಿ, ವಿಜರಾಜ್ ಕಲಶೆಟ್ಟಿ, ದತ್ತು ಸುಗಂಧಿ, ಗುಂಡು ಪಾಟೀಲ್, ರಾಜು ಮೂಲಗೆ, ಸಿದ್ದು ಕಂಬಾಳೆ, ವಿರೇಶ್, ಶೇಷಗಿರಿ ಮರತೂರಕರ್ ಮುಂತಾದವರು ಪಾಲ್ಗೊಂಡಿದ್ದರು.

ಪ್ರತಿಭಟನೆಕಾರರು ನಂತರ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ, ಶೇಕಡಾ ೨೨.೭೫ರ ಯೋಜನೆಯಡಿ ನಗರದ ಬುದ್ಧನಗರ, ತಾರಫೈಲ್, ಬಿದ್ದಾಪೂರ್ ಕಾಲೋನಿ ಮುಂತಾದ ಬಡಾವಣೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡುವುದರಲ್ಲಿ ಲಕ್ಷಾಂತರ ರೂ.ಗಳ ಅವ್ಯವಹಾರ ಆಗಿದೆ ಎಂದು ಆರೋಪಿಸಿದರು.

ಸಂಬಂಧಪಟ್ಟ ಗುತ್ತಿಗೆದಾರ ಜಾಕೀರ್ ಅವರು ಒಟ್ಟು ೨೫೦ ಶೌಚಾಲಯಗಳನ್ನು ನಿರ್ಮಿಸಬೇಕಾಗಿತ್ತು. ಆದಾಗ್ಯೂ, ಕೇವಲ ೧೦೦ರಿಂದ ೧೨೦ ಶೌಚಾಲಯಗಳನ್ನು ನಿರ್ಮಿಸಿ ಬೇರೆ ಯಾರದೋ ಶೌಚಾಲಯದ ಮುಂದೆ ಯಾರನ್ನೋ ನಿಲ್ಲಿಸಿ ಭಾವಚಿತ್ರ ತೆಗೆದು ಕಾರ್ಯಾಲಯಕ್ಕೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಅವರು ದೂರಿದರು.

ಈ ಕುರಿತು ಸೂಕ್ತ ತನಿಖೆಯ ಮೂಲಕ ಸಂಬಂಧಿಸಿದ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

37 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

44 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

58 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420