Tuesday, July 16, 2024
ಮನೆಬಿಸಿ ಬಿಸಿ ಸುದ್ದಿಔರಾದಕರ್ ವರದಿ ಜಾರಿಗೆ ಒತ್ತಾಯಿಸಿ ಕಲಬುರ್ಗಿಯಲ್ಲಿ ಪ್ರತಿಭಟನೆ

ಔರಾದಕರ್ ವರದಿ ಜಾರಿಗೆ ಒತ್ತಾಯಿಸಿ ಕಲಬುರ್ಗಿಯಲ್ಲಿ ಪ್ರತಿಭಟನೆ

ಕಲಬುರಗಿ: ಔರಾದಕರ್ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ಹಾಗೂ ಹಿಂಬಡ್ತಿಯಾದ ಹೈದ್ರಾಬಾದ್ ಕರ್ನಾಟಕ ಪೋಲಿಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಸಂದೀಪ್ ಪಿ. ಭರಣಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನಿಲ್ ಪೂಜಾರಿ, ವಿಶ್ವಾ ಡೇಕೂನ್, ಗೌತಮ್ ಗಣಜಲಖೇಡ್, ಅಭಿಲಾಷ್ ದರ್ಗಿ, ಸೂರ್ಯಕಾಂತ್ ಪೂಜಾರಿ, ಶಾಂತು ಡೊಣ್ಣೂರ್ ಮುಂತಾದವರು ಪಾಲ್ಗೊಂಡಿದ್ದರು.

ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಗೃಹ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಜನರು ನೆಮ್ಮದಿಯಿಂದ ಹಾಗೂ ಶಾಂತಿಯಿಂದ ಜೀವನ ಸಾಗಿಸಬೇಕಾದರೆ ಪೋಲಿಸರ ಪಾತ್ರ ಬಹುಮುಖ್ಯವಾಗಿದೆ. ಪೋಲಿಸ್ ಇಲಾಖೆಯವರು ತಮ್ಮ ಕಷ್ಟ, ಕಾರ್ಪಣ್ಯಗಳನ್ನು ಬದಿಗೊತ್ತಿ ಜನತೆಗಾಗಿ ಕೆಲಸವನ್ನು ಮಾಡುತ್ತಾರೆ. ಆದಾಘ್ಯೂ, ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೋಲಿಸರಿಗೆ ಅಗತ್ಯ ಸೌಲಭ್ಯಗಳನ್ನು ಒದಿಗಿಸುವ ದಿಸೆಯಲ್ಲಿ ರಾಜ್ಯ ಸರ್ಕಾರದ ಮುಂದಿರುವ ರಾಘವೇಂಧ್ರ ಔರಾದಕರ್ ಅವರ ವರದಿಯನ್ನು ಜಾರಿಗೊಳಿಸಬೇಕು ಹಾಗೂ ಹೈದ್ರಾಬಾದ್ ಕರ್ನಾಟಕದ ಭಾಗದವರಿಗೆ ೩೭೧(ಜೆ) ಅಡಿಯಲ್ಲಿ ಬಡ್ತಿಯಾಗಬೇಕಾದವರಿಗೆ ಹಿಂಬಡ್ತಿಯಾಗಿ ಅನ್ಯಾಯವಾಗಿದ್ದು, ರಾಜ್ಯದ ಗೃಹ ಸಚಿವರು ಹತ್ತು ದಿನಗಳೊಳಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ಅದು ಇಲ್ಲಿಯವರೆಗೆ ಅನುಷ್ಟಾನಕ್ಕೆ ಬಂದಿಲ್ಲ. ಆದ್ದರಿಂದ ಕೂಡಲೇ ಎರಡು ಬೇಡಿಕೆಗಳನ್ನು ಇಡೇರಿಸಬೇಕು ಎಂದು ಅವರು ಒತ್ತಾಯಿಸಿದರು.

ಒಂದು ವೇಳೆ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular