ಕಲಬುರಗಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ವಹಣೆಗಾಗಿ ಜಿಲ್ಲೆಯ ತಾಲೂಕಾ ಆಸ್ಪತ್ರೆಗಳಲ್ಲಿ ರಚಿಸಲಾದ ಐ.ಸಿ.ಯು.ಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ನಿರ್ವಹಿಸಲು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ವೈದ್ಯರು, ಶುಶ್ರೂಷಕರು ಹಾಗೂ ಗ್ರೂಪ್ “ಡಿ” ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ 2021ರ ಮೇ 10 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ (ವಾಕ್-ಇನ್-ಇಂಟರ್ವ್ಯೂವ್) ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿಗಳ ಅನುಮೋದನೆದನ್ವಯ ಜಿಲ್ಲೆಯ ತಾಲೂಕಾ ಮಟ್ಟದ ಆಸ್ಪತ್ರೆಗಳಾದ ಅಫಜಲಪುರ, ಆಳಂದ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ ಹಾಗೂ ಸೇಡಂಗಳಲ್ಲಿ ರಚಿಸಲಾದ ಐ.ಸಿ.ಯು. ಹಾಗೂ ಆಮ್ಲಜನಕ ಬೆಂಬಲಿತ ಹಾಸಿಗೆಗಳ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಈ ಕೆಳಕಂಡ ಹುದ್ದೆಗಳನ್ನು ಮೇರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನ ಏರ್ಪಡಿಸಲಾಗಿದೆ.
18 ಜನ ವೈದ್ಯರು ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಎಂ.ಬಿ.ಬಿ.ಎಸ್. ಅಂಕಪಟ್ಟಿ, ಇಂಟರ್ಶಿಪ್ ಮತ್ತು ಕೆ.ಎಮ್.ಸಿ. ರೇಜಿಸ್ಟೆçÃಷನ್ ಪ್ರ.ಪತ್ರದ ಶೈಕ್ಷಣಿಕ ದಾಖಲೆಗಳನ್ನು ಹೊಂದಿರಬೇಕು. ಪ್ರತಿ ಮಾಹೆ 60,000 ರೂ.ಗಳ ವೇತನ ನೀಡಲಾಗುತ್ತದೆ. ವಯೋಮಿತಿ 47 ವರ್ಷದೊಳಗಿರಬೇಕು.
18 ಜನ ಶುಶ್ರೂಷಕರು ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಡಿಪ್ಲೋಮಾ/ಬಿ.ಎಸ್ಸಿ ನರ್ಸಿಂಗ್ ಅಂಕಪಟ್ಟಿ, ಶುಶ್ರೂಷಕ ನೋಂದಣಿ ಪ್ರ.ಪತ್ರದ ಶೈಕ್ಷಣಿಕ ದಾಖಲಾತಿಗಳು ಹೊಂದಿರಬೇಕು. ಮಾಸಿಕ 25,000 ರೂ.ಗಳ ವೇತನ ನೀಡಲಾಗುತ್ತದೆ. ವಯೋಮಿತಿ 40 ವರ್ಷದೊಳಗಿರಬೇಕು.
18 ಜನ ಗ್ರೂಪ್ “ಡಿ” ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಶೈಕ್ಷಣಿಕ ದಾಖಲೆ ಹೊಂದಿರಬೇಕು. ಮಾಸಿಕ 15,000 ರೂ.ಗಳ ವೇತನ ನೀಡಲಾಗುತ್ತದೆ. ವಯೋಮಿತಿ 40 ವರ್ಷದೊಳಗಿರಬೇಕು.
ಇಚ್ಛೆಯುಳ್ಳ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿ ಮತ್ತು ಜೇರಾಕ್ಸ್ ದಾಖಲಾತಿಗಳೊಂದಿಗೆ ಹಾಗೂ ಪಾಸ್ಪೋರ್ಟ ಸೈಜ್ ಭಾವಚಿತ್ರದೊಂದಿಗೆ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು. ನಂತರ ಬಂದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ದೂರವಾಣಿ ಸಂಖ್ಯೆ 08472-278618ಗೆ ಸಂಪರ್ಕಿಸಲು ಕೋರಲಾಗಿದೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…