ಕಲಬುರ್ಗಿ: ಜಿಲ್ಲೆಯ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನಲ್ಲಿ ಹಾಗೂ ಹಳ್ಳಿ ಗಳ ವ್ಯಾಪ್ತಿಯಲ್ಲಿ ಬರುವ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಧೃಡಪಟ್ಟ ರೋಗಿಗಳಿಗೆ ಕೇಂದ್ರದಲ್ಲಿ ಪ್ರತ್ಯೇಕವಾದ ವಾರ್ಡ್ಗಳನ್ನು ಗುರುತಿಸಿ ಚಿಕಿತ್ಸೆ ನೀಡುವಂತೆ ಆದೇಶಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕ ಶಾಖೆ ಜೇವರ್ಗಿ ಆಗ್ರಹಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ತಶಿಲ್ದಾರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.
ರಾಜ್ಯದಲ್ಲಿ ಕರೋನವೈರಸ್ ಎರಡನೆ ಅಲೆ ಭೀಕರ ಪ್ರಮಾಣದಲ್ಲಿ ಆವರಿಸುತ್ತಿದ್ದ ಸಾಮಾನ್ಯ ಜನರ, ಕೂಲಿಕಾರ್ಮಿಕರ ಮಧ್ಯಮವರ್ಗದವರ, ಹಾಗೂ ಬಡವರ ಬದುಕಿಗೆ ತುಂಬಲಾರದ ನಷ್ಟವಾಗಿದೆ. ಆದರೆ ಸರಕಾರ ತನ್ನ ಕರ್ತವ್ಯ ನಿರ್ವಹಿಸುವಲ್ಲಿ ಆಮೆಗತಿಯಲ್ಲಿ ನಡೆದಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ.
ಕರೋನವೈರಸ್ ಧೃಡ ಪಟ್ಟರು ಸರಕಾರದ ಮತ್ತು ಸರಕಾರದ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಬೆಡ, ವೆಂಟಿಲೇಟರ್ ಗಳು ಆಕ್ಸ ಜನ್ ಸಿಗದೆ ರಸ್ತೆಯ ಮಧ್ಯದಲ್ಲಿ ಹಾಗೂ ಆಸ್ಪತ್ರೆ ಎದುರುಗಡೆ ಜೀವ ಕಳೆದುಕೊಳ್ಳುತ್ತಿರುವುದು ಸಾಮಾನ್ಯ ಸಂಗಸಂಗತಿಯಾಗಿದ್ದುಬೇಡ್ಡ್ ಗಳ ಮಾರಾಟದಲ್ಲಿ ಜಾಲಗಳು ಹುಟ್ಟಿಕೊಂಡಿರುವುದು ಅಮಾನವೀಯ ಸಂಗತಿ. ಸರಕಾರ ಇದಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ವಿಷಾದನೀಯ ಸಂಗತಿಯಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕ ಸಂಚಾಲಕರಾದ ಸಿದ್ದರಾಮ ಕಟ್ಟಿ ಕೊಳಕೂರ್ ತಿಳಿಸಿದ್ದಾರೆ.
ತಹಸೀಲ್ದಾರರಿಗೆ ಮನವಿ ಪತ್ರವನ್ನು ಸಲ್ಲಿಸುವಾಗ ಶಿವಲಿಂಗ ಹೆಗಡೆ ,ಬಸವರಾಜ್ ಕಟ್ಟಿ ,ಮರೆಪ್ಪ ಆಂದೋಲ, ಶ್ರೀನಾಥ್ ಕಟ್ಟಿಸಂಗವಿ, ದೇವರಾಜ ಬಣವಿ, ಸಂಗಣ್ಣ ಹೊಸಮನಿ. ಮನೋಹರ್ ಹೊಸ್ಮನಿ, ಬಂಡೆಪ್ಪ ಬೂಸ ಕೊಳಕೂರ್ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…