ಕಲಬುರಗಿ: ಒಂಬತ್ತು ತಿಂಗಳು ಹೊತ್ತು, ಹೆತ್ತ, ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಹಾಗೂ ಪೋಷಿಸುವ ತಾಯಿಗೆ ಸಮಾನವಾದ ವ್ಯಕ್ತಿ ಮತ್ತೊಬ್ಬರಿಲ್ಲ. ತಾಯಿಯ ಎನ್ನುವುದು ಬರೀ ಹೆಣ್ಣನ್ನು ಕುರಿತು ಹೇಳುವುದಲ್ಲ. ತಾಯಿಗೆ ಭೂಮಿಗೆ ಹೋಲಿಸಲಾಗುತ್ತದೆ. ಅಂದರೆ ಕಷ್ಟಗಳನ್ನು ಅನುಭವಿಸಿ, ತಾಳ್ಮೆಯಿಂದ ಇರುತ್ತಾಳೆ ಎಂಬುದಾಗಿದೆ. ಕೌಟುಂಬಿಕ ನಿರ್ವಹಣೆಯಲ್ಲಿ ತಾಯಿಯ ಪಾತ್ರ ಅಮೋಘವಾಗಿದೆಯೆಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ವಿಶ್ವ ಅಮ್ಮಂದಿರ ದಿನಾಚರಣೆ ಪ್ರಯುಕ್ತ, ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ನಗರದ ರಾಮತೀರ್ಥ ದೇವಸ್ಥಾನದ ಸಮೀಪದಲ್ಲಿರುವ ಕೊಳಗೇರಿ ಪ್ರದೇಶದ ಅಲೆಮಾರಿ ತಾಯಂದಿರಿಗೆ ಭಾನುವಾರ ಹಣ್ಣುಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.
ತಾಯಿಯು ಪ್ರೀತಿ, ಕರುಣೆ, ಮಾನವೀಯತೆಯನ್ನು ಉಳಿಸಿ, ಬೆಳೆಸುವ ಮಹಾನ ವ್ಯಕ್ತಿಯಾಗಿದ್ದಾಳೆ. ಎಲ್ಲರನ್ನು ಒಂದೂಗೂಡಿಸುವ ಶಕ್ತಿ ಆಕೆಯಲ್ಲಿದೆ. ದೇಶ, ನದಿ, ಪರಿಸರಕ್ಕೆ ತಾಯಿಯ ಸ್ವರೂಪದ ಹೆಸರನ್ನಿಟ್ಟು ಕರೆಯುವುದು ಆಕೆಯ ಮಹತ್ವವನ್ನು ಸಾರುತ್ತದೆ. ’ತಾಯಿಯೇ ಮೊದಲು ಗುರು’ ಎಂಬ ಮಾತು ಮಕ್ಕಳನ್ನು, ಮಹಾನ ವ್ಯಕ್ತಿಯನ್ನಾಗಿಸುವಲ್ಲಿ ಆಕೆಯ ಔಚಿತ್ಯವನ್ನು ತೋರಿಸುತ್ತದೆಯೆಂದು ನುಡಿದರು.
ಸಮಾಜ ಸೇವಕ ಎಸ್.ಎಸ್.ಪಾಟೀಲ ಬಡದಾಳ ಮಾತನಾಡಿ, ವರ್ಣಿಸಲು ಅಸಾಧ್ಯವಾದ ತಾಯಿಯನ್ನು ಪ್ರಸ್ತುತ ದಿನಗಳಲ್ಲಿ ಆಕೆಯ ಮಕ್ಕಳು ಸಮಾಜ ನಡೆಸುಕೊಳ್ಳುತ್ತಿರುವ ರೀತಿಯನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗುತ್ತದೆ. ಇಡಿ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು, ಆಕೆಯ ಇಳಿವಯಸ್ಸಿನಲ್ಲಿ ಸರಿಯಾಗಿ ನೋಡಿಕೊಳ್ಳದೆ, ವೃದ್ಧಾಶ್ರಮಕ್ಕೆ ಸೇರಿಸುವುದು ಅತ್ಯಂತ ನೀಚ, ಜವಾಬ್ದಾರಿಯುತ ಸಮಾಜ ತಲೆ ತಗ್ಗಿಸಬೇಕಾದ ವಿಷಯವಾಗಿದೆ. ಇದಕ್ಕೆ ಆಸ್ಪದ ನೀಡದೆ ಪ್ರತಿಯೊಬ್ಬರು ತಾಯಿಗೆ ಉತ್ತಮವಾಗಿ ಆರೈಕೆ ಮಾಡಬೇಕು, ಪೂಜ್ಯನೀಯ ಸ್ಥಾನವನ್ನು ನೀಡಿ ಗೌರವಿಸಬೇಕೆಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ನರಸಪ್ಪ ಬಿರಾದಾರ ದೇಗಾಂವ, ದೇವೇಂದ್ರಪ್ಪ ಗಣಮುಖಿ, ಅಣ್ಣಾರಾಯ ಎಚ್.ಮಂಗಾಣೆ, ಪ್ರಕಾಶ ಸರಸಂಬಿ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…