ಕಲಬುರಗಿ: ರಾಜ್ಯಸಭಾ ಮಾಜಿ ಸದಸ್ಯ, ಮಾಜಿ ಸಚಿವ ಹಿರಿಯ ನಾಯಕ ಕೆ.ಬಿ ಶಾಣಪ್ಪ ಕೊರೊನಾಗೆ ಬಲಿಯಾಗಿದ್ದಾರೆ.
ಜನತಾ ಪರಿವಾರ ನಾಯಕ ಎಂದೇ ಖ್ಯಾತಿ ಪಡೆದಿದ್ದ ಶಾಣಪ್ಪ ಅವರು ಜೆ. ಎಚ್. ಪಟೇಲ್ ಸಂಪುಟದಲ್ಲಿ ಮಂತ್ರಿಯಾಗಿದ್ದರು. ನಂತರ ಬಿಜೆಪಿ ಸೇರಿದ್ದ ಅವರನ್ನು ಮೊದಲು ರಾಜ್ಯಸಭೆಗೆ ನಾಮಕರಣಗೊಳಿಸಲಾಗಿತ್ತು. ತದನಂತರ ರಾಜ್ಯ ವಿಧಾನ ಪರಿಷತ್ ಗೂ ನಾಮನಿರ್ದೇಶನ ಗೊಳಿಸಲಾಗಿತ್ತು. ಇತ್ತೀಚಿಗೆ ಗಷ್ಟೇ ಅಂದರೆ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರು.