ಕಲಬುರಗಿ: ಮಾಜಿ ಸಚಿವರು, ಮಾಜಿ ರಾಜ್ಯ ಸಭಾ ಸದಸ್ಯರು ಆಗಿದ್ದ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್, ಮಾಜಿ ಉಪ ಸಭಾಪತಿಗಳಾದ ಬಿಆರ್ ಪಾಟೀಲ್, ಮಾಜಿ mlc ಅಲ್ಲಮ ಪ್ರಭು ಪಾಟೀಲ್, ಕೆಪಿಸಿಸಿ ಸದಸ್ಯರಾದ ಹಣಮಂತ ಭೂಸನೂರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕೆಬಿ ಶಾಣಪ್ಪ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜಕೀಯ ಮುತ್ಸದ್ಧಿಯಾಗಿದ್ದರು.ಕಾರ್ಮಿಕ ದುರೀಣರಾಗಿದ್ದ ಅವರು ಮೊದಲು ಕಮ್ಯುನಿಸ್ಟ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದರು.ಎರಡುಬಾರಿ ವಿಧಾನಪರಿಷತ್ ಸದಸ್ಯರಾಗಿ, ಸಚಿವರಾಗಿ , ರಾಜ್ಯಸಭಾ ಸದಸ್ಯರಾಗಿ ಅಪಾರವಾಗಿ ಜನಸೇವೆ ಮಾಡಿದಂಥವರು.
ವಾಗ್ಮಿಗಳಾಗಿದ್ದ ಅವರ ಅವರ ಅಗಲಿಕೆಯಿಂದ ದುಡಿಯುವ ವರ್ಗಕ್ಕೆ, ರಾಜಕೀಯ ಕ್ಷೇತ್ರಕ್ಕೆ, ಈ ಪ್ರದೇಶಕ್ಕೆ ಅಪಾರ ನಷ್ಟ ಉಂಟಾಗಿದೆ.ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬ ವರ್ಗದವರಿಗೆ ಹಾಗೂ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.