ಸುರಪುರ: ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಯಾದಗಿರಿ ಜಿಲ್ಲೆಗೆ ಆಗಮಿಸುತ್ತಿರುವ ಸಚಿವ ಆರ್.ಶಂಕರಗೆ ತಾಲೂಕಿನ ಬಂಡೊಳ್ಳಿ ಚೆಕ್ಪೋಸ್ಟ್ನಲ್ಲಿ ಸ್ವಾಗತಿಸಲಾಯಿತು.
ಬಂಡೊಳ್ಳಿ ಚೆಕ್ಪೋಸ್ಟ್ನಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಹಾಗು ಸುರಪುರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಉಸ್ತುವಾರಿ ಸಚಿವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಆರ್.ಶಂಕರ,ಯಾವುದೇ ಲೋಪವಾಗದ ರೀತಿಯಲ್ಲಿ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗು ಪೊಲೀಸ್ ಸಿಬ್ಬಂದಿಗಳಿದ್ದರು.