ಸಗರದಲ್ಲಿ ರಾಸಾಯನಿಕ ದ್ರಾವಣ ಸಿಂಪಡಣೆ

0
22

ಶಹಾಪುರ : ಕೊರೊನಾ ಎರಡನೇ ಅಲೆ ತಡೆಗಟ್ಟುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಗರ ಗ್ರಾಮದ ಬಿಜೆಪಿ ಮುಖಂಡರಾದ ಚಂದಪ್ಪ ಸೇರಿ ಹಾಗೂ ಶ್ರೀಕಾಂತ್ ಗೌಡ ಸುಬೇದಾರ್ ಅವರ ನೇತೃತ್ವದಲ್ಲಿ ಸ್ವಯಂಪ್ರೇರಿತರಾಗಿ ಗ್ರಾಮದ ತುಂಬೆಲ್ಲಾ ರಾಸಾಯನಿಕ ದ್ರಾವಣ ಸಿಂಪಡಣೆ ಮಾಡಲಾಯಿತು.ಸರಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಕೊರೋನಾ ಮಹಾ ರೋಗ ಹತೋಟಿಗೆ ಬರುತ್ತಿಲ್ಲ ಅಲ್ಲಲ್ಲಿ ಸಾವು ನೋವುಗಳು ಸಂಭವಿಸುತ್ತಿದ್ದು ಅನಗತ್ಯವಾಗಿ ಯಾರೂ ಮನೆಯಿಂದ ಹೊರಗಡೆ ಬರಬಾರದು ಎಂದು ತಿಳಿಪಡಿಸಿದರು.

ಕರೋನಾ ಮಹಾಮಾರಿ ಭೀಕರವಾಗಿದ್ದು ಇದು ತಮಾಷೆ ಮಾಡುವ ಹೊತ್ತಲ್ಲ ಎಂದು ಪರಿಪರಿಯಾಗಿ ಬೇಡಿಕೊಂಡರು ಕೊರೋನಾದ ಬಗ್ಗೆ ಭಯ ಬೇಡ ಜಾಗೃತರಾಗಿರಿ, ಪ್ರತಿಯೊಬ್ಬರೂ ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಿ ಕೊರೋನಾ ಹೊಡೆದೋಡಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಪ್ರತಿ ವಾರ್ಡ್ ಗಳಲ್ಲಿ ಜನಜಾಗೃತಿ ಮೂಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಚಂದ್ರಪ್ಪ ಸೇರಿ, ಭೀಮರಾಯ ಸೇರಿ,ಭಾಗಣ್ಣ ಹೇರುಂಡಿ,ಮಲ್ಲಪ್ಪ ಕೂಡ್ಲುರ,ಮಾಲಕರೆಡ್ಡಿ,ಬಸವರಾಜ ಜಾಯಿ,ಹಾಗೂ ಇತರರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here