ನ್ಯಾಯವಾದಿ ಮಲ್ಲಿಕಾರ್ಜುನ ಬಿಲ್ಲವ್ ಕೊರೊನಾಗೆ ಬಲಿ

0
28

ಸುರಪುರ :ನಗರದ ಹಸನಾಪುರದ ಮುಖಂಡ ಮತ್ತು ವಕೀಲರು ಹಾಗೂ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಸಂಸ್ಥೆಯ ಡಿಗ್ರಿ ಕಾಲೇಜಿನ ಅಧೀಕ್ಷಕರಾದ ಮಲ್ಲಿಕಾರ್ಜುನ ಬಿಲ್ಲವ್ ಅವರು ಕೊರೊನಾದಿಂದಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

೫೪ ವರ್ಷ ವಯಸ್ಸಿನ ಮಲ್ಲಿಕಾರ್ಜುನ ಬಿಲ್ಲವ್ ಅವರು ಪತ್ನಿ,ಓರ್ವ ಪುತ್ರ ಹಾಗೂ ಪುತ್ರಿ,ಸಹೋದರ ಹಾಗೂ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಬಿಲ್ಲವ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ,ಮೃತರ ಅಂತ್ಯಕ್ರಿಯೆ ಹಸನಾಪುರದಲ್ಲಿ ಸೋಮವಾರದಂದು ನೆರವೇರಿತು. ಎಲ್‌ಎಲ್‌ಬಿ ಪದವೀಧರರು ಆಗಿದ್ದ ಅವರು ಇಲ್ಲಿನ ನ್ಯಾಯಾಲಯದಲ್ಲಿ ವಕೀಲ ವೃತ್ತಿಯಲ್ಲಿ ಅವರು ಕೆಲ ವರ್ಷ ಸೇವೆ ಸಲ್ಲಿಸಿದ್ದರು.ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಮತ್ತು ಡಾ:ಬಿ.ಆರ್.ಅಂಬೇಡ್ಕರ್ ವಿದ್ಯಾವರ್ಧಕ ಸಂಸ್ಥೆಯ ಎಲ್ಲಾ ಶಿಕ್ಷಕರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here