ಬಿ.ಬಿ.ಎಂ.ಪಿ. ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್‍ಗಳಲ್ಲಿ ಉಚಿತ ಆಹಾರ ವಿತರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್‍ಗಳಲ್ಲಿ ದಿನಾಂಕ:12-05-2021 ರಿಂದ ಬಡವರ್ಗದ ಜನರು, ವಲಸಿಗರು, ಕೂಲಿ ಕಾರ್ಮಿಕರಿಗೆ ದಿನದ ಮೂರೊತ್ತು (ಬೆಳಗಿನ ಉಪಹಾರ, ಮಧ್ಯಾಹ್ನದ ಹಾಗೂ ರಾತ್ರಿ ಊಟ) ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.

ಉಚಿತ ಆಹಾರ ಪೊಟ್ಟಣಗಳನ್ನು ಲಾಕ್‍ಡೌನ್ ಅವಧಿ ಮುಗಿಯುವವರೆಗೂ ಅಂದರೆ ದಿನಾಂಕ: 12-05-2021 ರಿಂದ 24-05-2021ರ ವರೆಗೆ ವಿತರಿಸಲಾಗುವುದು. ಇಂದಿರಾ ಕ್ಯಾಂಟೀನ್‍ಗಳಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಗುರುತಿನ ಚೀಟ (ಮತದಾರರ ಉರುತಿನ ಚೀಟಿ, ಆಧಾರ್ ಕಾರ್ಡ್, ಡಿ.ಎಲ್, ಕಾರ್ಮಿಕ ಇಲಾಖೆಯ ಗುರುತಿನ ಚಈಟಿ ಸೇರಿದಂತೆ ಇನ್ನಿತ್ಯಾದಿ ಗುರುತಿನ ಚೀಟಿಗಳು) ಸರಬರಾಜುದಾರರಿಗೆ ಒದಗಿಸಬೇಕು.

ಪ್ರತಿಯೊಬ್ಬ ವ್ಯಕ್ತಿ / ಫಲಾನುಭವಿಗಳಿಗೂ ಗರಿಷ್ಠ 3 ಆಹಾರದ ಪೊಟ್ಟಣಗಳನ್ನು ನೀಡಲಾಗುವುದು ಅಥವಾ ಪಡಿತರ ಚೀಟಿಯಲ್ಲಿರುವ ಕುಟುಂಬದ ಒಟ್ಟು ವ್ಯಕ್ತಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರದ ಪ್ಯಾಕೆಟ್‍ಗಳನ್ನು ನೀಡಲಾಗುವುದು. ನಗರದ ಎಲ್ಲಾ ಇಂದಿರಾ ಕ್ಯಾಂಟೀನ್‍ಗಳಲ್ಲಿ ಊಟದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತು ಆಹಾರ ಪೊಟ್ಟಣಗಳನ್ನು ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420