ಮಕ್ಕಳ ಮಾರಾಟ, ಸಾಗಾಣಿಕೆ ಅಪರಾಧ: ಕಾನೂನು ಬಾಹಿರದತ್ತು ಪಡೆದಲ್ಲಿ ಕಠಿಣ ಶಿಕ್ಷೆ

ಬೆಂಗಳೂರು: ಬಾಲ ನ್ಯಾಯಾಲಯ (ಮಕ್ಕಳ ಪಾಲೆನೆ ಮತ್ತು ರಕ್ಷಣೆ) ಕಾಯ್ದೆ 2015 ಮತ್ತು ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016 ಹಾಗೂ ದತ್ತು ಅಧಿಸೂಚನೆ 2017ರ ಅಡಿಯಲ್ಲಿ ಮಾತ್ರ ಅನಾಥ, ಪರಿತ್ಯಕ್ತ ಅಥವಾ ಒಪ್ಪಿಸಲ್ಪಟ್ಟ ಮಕ್ಕಳನ್ನು ದತ್ತು ನೀಡಲಾಗುವುದು. ಮಗುವನ್ನು ದತ್ತು ಪಡೆಯಲು ಆಸಕ್ತಿ ಇರುವವರು  CARA     ವೆಬ್‍ಸೈಟ್  www.cara.nic.in  ನಲ್ಲಿ ನೊಂದಾಯಿಸಿಕೊಳ್ಳಬೇಕು.

ಕೋವಿಡ್ – 19 ಕಾರಣದಿಂದಾಗಿ ಮಗು ಅನಾತವಾಗಿದ್ದರೆ ಮತ್ತು ಮಗುವನ್ನು ನೋಡಿಕೊಳ್ಳಲು ಸಂಬಂಧಿಕರು ಯಾರೂ ಸಿದ್ದರಿಲ್ಲದಿದ್ದರೆ ಅಂತಹ ಮಗುವನ್ನು 24 ಗಂಟೆಗಳ ಒಳಗೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಬೇಕು. (ಪ್ರಯಾಣಕ್ಕೆ ತೆಗೆದುಕೊಂಡ ಸಮಯವನ್ನು ಹೊರತುಪಡಿಸಿ) ನಿಗದಿತ ಕಾರ್ಯ ವಿಧನಗಳನ್ನು ಉಲ್ಲಂಘಿಸಿ ಮಗುವನ್ನು ನೇರವಾಗಿ ದತ್ತು ತೆಗೆದುಕೊಳ್ಳುವುದು ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015ರ ಸೆಕ್ಷನ್ 80ರಡಿ ಅಪರಾಧವಾಗಿರುತ್ತದೆ.

ಇದು ಮೂರು ವರ್ಷಗಳವರೆಗೆ ವಿಸ್ತರಿಸಲ್ಪಡಬಹುದಾದ ಕಾರಗೃಹ ದಂಡನೆ ಅಥವಾ ದಂಡ 1 ಲ್ಕಷ ರೂಪಾಯಿಗಳ ಜುಲ್ಮಾನೆ ಶಿಕ್ಷೆ ಅಥವಾ ಉಭಯ ಶಿಕ್ಷೆಗಳಿಗೆ ದಂಡನೀಯವಾಗುವುದು. ಯಾವುದೇ ಉದ್ದೇಶಕ್ಕಾಗಿ ಮಗುವನ್ನು ಮಾರಾಟ ಮಾಡುವುದು ಅಥವಾ ಕೊಂಡುಕೊಳ್ಳುವುದು ಸೆಕ್ಷನ್ 81 ಜೆಜೆ ಕಾಯ್ದೆ 2015ರ ಅಡಿಯಲ್ಲಿ ಅಪರಾಧವಾಗಿದೆ ಮತ್ತು ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಕಾರಗೃಹ ಶಿಕ್ಷೆ ಮತ್ತು ರೂ. 1 ಲಕ್ಷ ರೂಪಾಯಿಗಳ ಜುಲ್ಮಾನೆ ದಂಡನೀಯಗಳೆರಡಕ್ಕೂ ದಂಡನೀಯವಾಗುವುದು. ಅಂತಹ ಅಪರಾಧ ಎಸಗಲಾಗಿದೆ ಎಂದು ತಿಳಿದುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಅಥವಾ ಪೊಲೀಸರಿಗೆ ಕರೆ ಮಾಡುವುದು.

ಯಾವುದೇ ವ್ಯಕ್ತಿಯು ಮಗುವು ಅನಾಥವಾಗಿದೆ ಅಥವಾ ಪೋಷಕರ ಪೋಷಣೆಯಿಂದ ವಂಚಿತವಾಗಿದೆ ಎಂದು ಕಂಡುಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 10989 ಅಥವಾ ಪೊಲೀಸರಿಗೆ ಕರೆ ಮಾಡಬಹುದು ಅಥವಾ ಮಗುವನ್ನು ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ 24 ಗಂಟೆಗಳ ಒಳಗೆ ತಿಳಿಸಬೇಕು. ಮಗುವನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ವಿಫಲವಾದರೆ ಸೆಕ್ಷಣ್ 33 ಮತ್ತು 34 ಜೆಜೆ ಕಾಯ್ದೆ 2015ರ ಅಡಿಯಲ್ಲಿ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 10,000 ರೂಪಾಯಿಗಳ ದಂಡ ಅಥವಾ ಎರಡನ್ನೂ ವಿಧಿಸಬಹುದು.

ಕೋವಿಡ್ -19ನಿಂದಾಗಿ ಮಕ್ಕಳು ಅನಾತವಾಗಿದ್ದಲ್ಲಿ ಅಂತಹ ಮಕ್ಕಳನ್ನು ನೇರವಾಗಿ ದತ್ತು ಪಡೆಯಬಹುದು ಎಂದು ಸಾಮಾಜಿಕ ಮಾಧ್ಯಮಗಳ ಮೂಲಕ ಸಂದೇಶಗಳು ಬಂದರೆ ಅದು ಸುಳ್ಳು ಸುದ್ದಿಯಾಗಿರುತ್ತದೆ ಮತ್ತು ಇಂತಹ ಮಾಹಿತಿಯನ್ನು ಸ್ವೀಕರಿಸಿದ್ದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ವರದಿ ಮಾಡಿ ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಇಂತಹ ಸುಳ್ಳು ಸುದ್ದಿ ಸಂದೇಶಗಳನ್ನು ಸೃಷ್ಟಿಸುವವರು ಮತ್ತು ಸಂದೇಶ ರವಾನೆ ಮಾಡುವವರು ಯಾರೇ ಆಗಿದದರೂ ಅವರಿಗೆ ಅಕ್ರಮ ದತ್ತು ಮತ್ತು ಮಾನವ ಕಳ್ಳ ಸಾಗಾಣಿಕೆಗೆ ಸಹಾಯ ಮಾಡಿದ ಅಪರಾಧಕ್ಕೆ ಕಠಿಣ ಶಿಕ್ಷೆಯಾಗುತ್ತದೆ.

ರಾಜ್ಯದ ಮಾಧ್ಯಮಗಳಲ್ಲಿ ಕೋವಿಡ್ -19 ರಿಂದಾಗಿ ಅನಾಥರಾದಮಕ್ಕಳನ್ನು ಕುರಿತು ವರದಿಗಳು ಬರುತ್ತಿವೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015ರ ಸೆಕ್ಷನ್ 74 ಅನ್ವಯ ಈ ರೀತಿಯಾಗಿ ಹೇಳಲಾಗಿರುತ್ತದೆ.

No report in any newspaper, magazine, news-sheet or audio-visual media or other forms of communication regarding any inquiry or investigation or judicial procedure, shall disclose the name, address or school or any other particular, which may lead to the identification of a child in conflict with law or a child in need of care and protection or a child victim or witness of a crime, involved in such matter under any other law for the time being in force, nor shall the picture of any such child be published. Provided that for reasons to be recorded in writing the Board or Committee, as the case may be, holding the inquiry may permit such disclosure, if in its opinion such disclosure is in the best interest of the child

The police shall not disclose any record of the child for the purpose of character certificate or otherwise in cases where the case has been closedor disposed of.

Any person contravening the provisions of sub section(7) shall be punishable with imprisonment for a term which may extend to six months or fine which may extend to two lakh rupees or both..

ಪಾಲನೆ ಮತ್ತು ರಕ್ಷಣೆ ಅವಶ್ಯವಿರುವ ಹಾಗೂ ಬಾಧಿತ ಮಕ್ಕಳ ಮಾಹಿತಿಯನ್ನು ಮಾದ್ಯಮಗಳಲ್ಲಿ ಪ್ರಸಾರ ಮಾಡುವುದರಿಂದ ಮಕ್ಕಳಿಗೆ ವಿವಿಧ ತೊಂದರೆ / ಸಮಸ್ಯೆಗಳು ಉಂಟಾಗಬಹುದಾದರಿಂದ ಸದರಿ ಮಕ್ಕಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದು ಮೇಲಿನಂತೆ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಯ್ದೆ 2015ರ ಸೆಕ್ಷನ್ 74ನಲ್ಲಿ ನಿಷೇಧಿಸಲಾಗಿದೆ.

ಈ ರೀತಿಯಾಗಿ ಸಂಕಷ್ಟದಲ್ಲಿರುವ ಮಕ್ಕಳು ರಾಜ್ಯದ ಯಾವುದೇ ಭಾಗದಲ್ಲಿ ಯಾವುದೇ ಕಾರಣದಿಂದ ಅನಾಥರಂತಹ ಪರಿಸ್ಥತಿಯಲ್ಲಿ ಇದ್ದದ್ದೇ ಆದಲ್ಲಿ, ಆ ಕುರಿತು ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಬೇಕು. ಮಕ್ಕಳ ಸಹಾಯವಾಣಿ ಸಿಬ್ಬಂದಿ ಮಕ್ಕಳ ಪರಿಸ್ಥಿತಿಯನ್ನು ಆದ್ಯಯನ ಮಾಡಿ ವಿಚಾರವನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕಕ್ಕೆ ವರದಿ ಮಾಡುತ್ತಾರೆ.

ಪ್ರತಿ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ಚಟುವಟಿಕೆಗಳನ್ನು ನಿರ್ವಹಿಸುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ. ಕೋವಿಡ್- 19 ರಿಂದಾಗಿ ಮಕ್ಕಳು ಅನಾಥರು ಅಥವಾ ಅರೆ ಅನಾಥರಾದಂತಹ ಪರಿಸ್ಥಿತಿಗಳನ್ನು ಜಿಲ್ಲಾಧಿಕಾರಿಗಳ ಮುಂದಾಳತ್ವದಲ್ಲಿ ಅನುಸರಣೆ ಮಾಡಲಾಗುತ್ತಿದೆ.

ರಾಜ್ಯದ ಯಾವುದೇ ಭಾಗದಲ್ಲಿ ಯಾವುದೇ ಮಕ್ಕಳು ಸಂಕಷ್ಟದಲ್ಲಿ ಇದ್ದಲ್ಲಿ ಆ ಕುರಿತು ಮಾಹಿತಿ ಇರುವವರು ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ತಿಳಿಸುವಂತೆ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420