ಬಿಸಿ ಬಿಸಿ ಸುದ್ದಿ

ಜೀವಿಗಳ ಉಳಿವಿಗೆ ಗಿಡ-ಮರಗಳ ರಕ್ಷಣೆ ಅಗತ್ಯ

ಕಲಬುರಗಿ: ಮಾನವ ತನ್ನ ದುರಾಸೆಯಿಂದ ಪರಿಸರದ ಮೇಲೆ ದಬ್ಬಾಳಿಕೆ ಮಾಡಿ, ಅನೇಕ ಗಿಡ-ಮರಗಳನ್ನು ನಾಶಪಡಿಸಿ ಪರಿಸರ ಅಸಮತೋಲನಕ್ಕೆ ಕಾರಣವಾಗಿದ್ದಾನೆ. ಇದು ಪರಿಸರ ವ್ಯವಸ್ಥೆ ಮತ್ತು ಜೀವಿಗಳ ಮೇಲೆ ನೇರವಾದ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಎಲ್ಲೆಡೆ ಗಿಡಗಳನ್ನು ನೆಟ್ಟು, ಅವುಗಳನ್ನು ಪೋಷಿಸಿಸುವುದು ಪ್ರಸ್ತುತ ದಿವಸಗಳಲ್ಲಿ ತುಂಬಾ ಅವಶ್ಯಕವಾಗಿದೆಯೆಂದು ಮುಖಂಡ, ಸಮಾಜ ಸೇವಕ ಶರಣು ಭುಸನೂರ ಅಭಿಮತ ವ್ಯಕ್ತಪಡಿಸಿದರು.

ನಗರದ ಕೈಲಾಸ ನಗರದಲ್ಲಿನ ಶಿವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ’ಬಸವ ಜಯಂತಿ’ ಅಂಗವಾಗಿ ’ಬಸವೇಶ್ವರ ಸಮಾಜ ಸೇವಾ ಬಳಗ’ ಮತ್ತು ’ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಇವುಗಳ ವತಿಯಿಂದ ಗುರುವಾರ ಬೆಳೆಗ್ಗೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಅಧ್ಯಕ್ಷ ಸುನೀಲಕುಮಾರ ವಂಟಿ ಮಾತನಾಡಿ, ಯಾವುದೇ ಆಚರಣೆಗಳು ಅರ್ಥಪೂರ್ಣವಾಗಿ ಮಾಡಿದರೆ ಅದಕ್ಕೆ ಹೆಚ್ಚಿನ ಬೆಲೆ ಬರಲು ಸಾಧ್ಯವಿದೆ. ಪ್ರಸ್ತುತ ದಿಬಸಗಳಲ್ಲಿ ಆಕ್ಸಿಜನ್ ಹಾಹಾಕಾರ ಕಂಡುಬರುತ್ತಿದ್ದು, ಈಗಲಾದರೂ ಎಚ್ಚರಗೊಂಡು ಪ್ರತಿಯೊಬ್ಬರು ತಮ್ಮ ಮನೆಯ ಸುತ್ತ-ಮುತ್ತಲೂ ಗಿಡಗಳನ್ನು ನೆಟ್ಟು, ಪೋಷಿಸಬೇಕು. ನಮ್ಮ ದೇಶದ ಒಟ್ಟು ವಿಸ್ತೀರ್ಣದಲ್ಲಿ ಶೇ.೩೩ರಷ್ಟು ಅರಣ್ಯದ ಅವಶ್ಯಕತೆಯಿದೆ. ಆದರೆ, ಪ್ರಸ್ತುತವಾಗಿ ಇದರ ಪ್ರಮಾಣ ಶೇ.೨೧.೫ರಷ್ಟಿದ್ದು, ಇದರಿಂದ ಏರು-ಪೇರಾಗುತ್ತಿದೆಯೆಂದರು.

ಪ್ರಮುಖರಾದ ಎಚ್.ಬಿ.ಪಾಟೀಲ, ನರಸಪ್ಪ ಬಿರಾದಾರ ದೇಗಾಂವ, ರಾಜೇಂದ್ರ ಬಡಿಗೇರ, ದೇವೇಂದ್ರಪ್ಪ ಗಣಮುಖಿ, ಅಣ್ಣಾರಾಯ ಎಚ್.ಮಂಗಾಣೆ, ನಾಗೇಶ ತಿಮಾಜಿ ಬೆಳಮಗಿ, ಕೃಷ್ಣಪ್ಪ ಬೆಳಮಗಿ, ದೌಲತ್ ಮಿಯಾ ಇದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

23 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago