ಕಲಬುರಗಿ: ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ಹಿರಿಯ ಪತ್ರಕರ್ತರಾದ ಜಯತೀರ್ಥ ಕಾಗಲಕಾರ ಅವರ ಅಕಾಲಿಕ ನಿಧನ ಪತ್ರಿಕೋದ್ಯಮದಲ್ಲಿ ಈ ಭಾಗದ ವ್ಯಕ್ತಿಯಲ್ಲ ಶಕ್ತಿಯಾಗಿದ್ದಾರೆ. ಯುವಕರಿಗೆ ಇವರು ಯುವ ಶಕ್ತಿಯಾಗಿ ಮಾರ್ಗದರ್ಶನ ನೀಡಿದ್ದಾರೆ. ಇವರ ಅಗಲಿಕೆ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಪಾಧ್ಯಕ್ಷರಾದ ಗುರುಬಸಪ್ಪ ಸಜ್ಜನಶೆಟ್ಟಿ ಶೋಕ ವ್ಯಕ್ತಪಡಿಸಿದ್ದಾರೆ.