ಮೇ ಮಾಹೆ: ಕಲಬುರಗಿ ತಾಲೂಕಿನ ಪಡಿತರದಾರರಿಗೆ ಆಹಾರ ಧಾನ್ಯ ವಿತರಣೆ

ಕಲಬುರಗಿ: ಕೋವಿಡ್-19ರ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ. ಹಾಗೂ ಪಿ.ಎಂ.ಜಿ.ಕೆ.ಎ.ವೈ. ಹಂಚಿಕೆಯಡಿ 2021ರ ಮೇ ಮಾಹೆಯಲ್ಲಿ ಕಲಬುರಗಿ ತಾಲೂಕಿನ ಎಎವೈ/ ಅಂತ್ಯೋದಯ ಅನ್ನ, ಬಿ.ಪಿ.ಎಲ್./ ಆದ್ಯತಾ ಹಾಗೂ ಎ.ಪಿ.ಎಲ್. (ಆದ್ಯತೇತರ) ಪಡಿತರ ಚೀಟಿ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಕಲಬುರಗಿ ತಹಶೀಲ್ದಾರರಾದ ಪ್ರಕಾಶ ಕುದರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ ತಾಲೂಕಿನ ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಕೋವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜನದಟ್ಟಣೆ ಉಂಟಾಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಪಡಿತರ ಆಹಾರ ಧಾನ್ಯವನ್ನು ಪಡೆಯಬೇಕೆಂದು ಕಲಬುರಗಿ ತಹಶೀಲ್ದಾರರು ಅವರು ಮನವಿ ಮಾಡಿದ್ದಾರೆ.

ಕಲಬುರಗಿ ತಾಲೂಕಿನ 9,469 ಎಎವೈ ಪಡಿತರ ಚೀಟಿಗಳ 38,763 ಸದಸ್ಯರಿಗೆ ಮತ್ತು 50,522 ಪಿ.ಎಚ್.ಎಚ್. (ಬಿ.ಪಿ.ಎಲ್.) ಪಡಿತರ ಚೀಟಿಗಳ 1,67,669 ಸದಸ್ಯರಿಗೆ ಹಾಗೂ 1,426 ಎ.ಪಿ.ಎಲ್. (ವಿಲ್ಲಿಂಗ್‍ನೆಸ್) ಪಡಿತರ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಆಹಾರ ಧಾನ್ಯವನ್ನು ವಿತರಿಸಲಾಗುತ್ತಿದೆ.

ಎಎವೈ/ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ. ಅಕ್ಕಿ ಮತ್ತು ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ.

ಬಿಪಿಎಲ್/ ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ (ಪ್ರತಿ ಸದಸ್ಯರಿಗೆ ಒಟ್ಟು 10 ಕೆ.ಜಿ ಅಕ್ಕಿ) ಹಾಗೂ ಪ್ರತಿ ಪಡಿತರ ಚೀಟಿಗೆ 2 ಕೆ.ಜಿ. ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ.

ಎಪಿಎಲ್ /ಆದ್ಯತೇತರ ಏಕಸದಸ್ಯ ಇರುವ ಪಡಿತರ ಚೀಟಿಗೆ 5 ಕೆ.ಜಿ. ಅಕ್ಕಿ ಮತ್ತು ಒಂದಕ್ಕಿಂತ ಹೆಚ್ಚು ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ. ಅಕ್ಕಿಯನ್ನು ಪ್ರತಿ ಕೆ.ಜಿ.ಗೆ ದರ 15 ರೂ. ರಂತೆ ವಿತರಿಸಲಾಗುತ್ತದೆ.

ಅಂತರರಾಜ್ಯ/ ಅಂತರ್‍ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420