ವರ್ತಕರ ಸಂಘದ ವತಿಯಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪಲ್ಸ್ ಆಕ್ಸಿಮೀಟರ್ ಕೂಡುಗೆ

ಕೋಲಾರ : ನರಸಾಪುರ ಗ್ರಾಮದ ವರ್ತಕರ ಸಂಘದಿಂದ 10 ಪಲ್ಸ್ ಆಕ್ಸಿಮೀಟರ್ ಗಳನ್ನು ನರಸಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡುಗೆಯಾಗಿ ನೀಡಲಾಯಿತು. ಇಂದು ನರಸಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ವರ್ತಕರ ಸಂಘದ ವತಿಯಿಂದ ಹತ್ತು ಪಲ್ಸ್ ಆಕ್ಸಿಮೀಟರ್ ಗಳನ್ನು ನರಸಾಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಚಿತವಾಗಿ ನೀಡಿದರು.

ಈ ಸಭೆಯನ್ನುದ್ದೇಶಿಸಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿಗಳಾದ ರಮ್ಯಾ ದೀಪಿಕಾ ರವರು ನರಸಾಪುರ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸದೆ ಇದ್ದಲ್ಲಿ ಅದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಹೇಳುತ್ತಾ ಗ್ರಾಮದಲ್ಲಿನ ಎಲ್ಲಾ ಬ್ಲಾಕುಗಳಲ್ಲಿ ಸ್ವಯಂಸೇವಕರನ್ನು ನೇಮಿಸಿ ಮನೆಯ ಅಂಗಳಕ್ಕೆ ದಿನಸಿ ಮತ್ತು ತರಕಾರಿಗಳನ್ನು ತಲುಪುವಂತೆ ಮಾಡುವುದಕ್ಕೆ ಕ್ರಮಕೈಗೊಳ್ಳಬೇಕೆಂದು ಕರೆನೀಡಿದರು.

ಇದೇ ಸಂದರ್ಭದಲ್ಲಿ ಸುಮಾರು ಹದಿನೈದು ಸಾವಿರಕ್ಕಿಂತಲೂ ಹೆಚ್ವು ಜನಸಂಖ್ಯೆ ಹೊಂದಿರುವುದರಿಂದ ಮುಖ್ಯವಾಗಿ ನರಸಾಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಬ್ಬ ಎಂ.ಬಿ.ಬಿ.ಎಸ್ ಪದವಿ ಗಳಿಸಿದ ವೈದ್ಯರಿಲ್ಲದಿರುವುದರಿಂದ ಒಬ್ಬ ಎಂ.ಬಿ.ಬಿ.ಎಸ್ ಮಾಡಿರುವ ವೈದ್ಯರನ್ನ ನೇಮಿಸಬೇಕೆಂದು ಸಭೆಯಲ್ಲಿದ್ದ ಎಲ್ಲರೂ ಖೇದ ವ್ಯಕ್ತಪಡಿಸಿದರು.

ಕೋಲಾರದಿಂದ ಆಗಮಿಸಿದ್ದ ಕಾರ್ಯನಿರ್ವಾಹಣಾಧಿಕಾರಿಗಳಾದ ಎನ್ ವಿ ಬಾಬು ರವರು ಮಾತನಾಡಿ ಸರ್ಕಾರಿ ನಿಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಕಾರ್ಖಾನೆಗಳಲ್ಲಿ ದುಡಿಯುವ ಕಾರ್ಮಿಕರ ಹಿತಾಸಕ್ತಿಯನ್ನು ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಮುಖೇನ ಪಂಚಾಯಿತಿ ವತಿಯಿಂದ ಮನವಿ ಮಾಡಲು ಸೂಚಿಸಿದರು ಹಾಗೆಯೇ ಉತ್ತಮ ರೀತಿಯಲ್ಲಿ ಸೀಲ್ಡೌನ್ ಮಾಡೋದಕ್ಕೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ರಮ್ಯ ದೀಪಿಕಾ, ಕಾರ್ಯನಿರ್ವಾಹಣಾಧಿಕಾರಿ ಎನ್ ವಿ ಬಾಬು, ನರಸಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಚ್ ಎಂ ರವಿ, ಆರೋಗ್ಯ ನೀರಿಕ್ಷಕರಾದ ರಾಘವೇಂದ್ರ, ಕಲ್ಲಹಳ್ಳಿ ರಾಜಣ್ಣ, ಉಪಾಧ್ಯಕ್ಷ ಸುಮಾನ್ ಚಂದ್ರು, ವರ್ತಕರ ಸಂಘದವರಾದ ಭಾನು ಪ್ರಕಾಶ್, ಓಂ ಪ್ರಕಾಶ್, ಕೆ ಇ ಬಿ ಚಂದ್ರು, ಕುಮಾರ್, ರಾಜೇಂದ್ರ, ಎಸ್ ಮುನಿರಾಜು, ದೇವರಾಜ್, ಇಂಚರ ನಾರಾಯಣಸ್ವಾಮಿ, ಎನ್ ಬಿ ಶ್ರೀನಿವಾಸ್, ಮುರಳಿ, ಅವಿನಾಶ್, ಎನ್.ಲೋಕೇಶ್, ಹಾಗೂ ವರ್ತಕರ ಸಂಘದ ಪದಾಧಿಕಾರಿಗಳು ಮತ್ತು ನರಸಾಪುರ ಗ್ರಾಮ ಪಂಚಾಯ್ತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420