ಬಿಸಿ ಬಿಸಿ ಸುದ್ದಿ

ಸಾರ್ವಜನಿಕರ ಸೇವೆಗೆ ವೆಲ್‌ನೆಸ್ ಸೆಂಟರ್ ಸಿದ್ಧ

ಕಲಬುರಗಿ: ಕಲಬುರಗಿ ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಹೈ.ಕ. ಮಂಡಳಿಯ ೧೯.೫ ಲಕ್ಷ ರೂ. ಅನುದಾನದಲ್ಲಿ ಸ್ಥಾಪಿಸಲಾಗಿರುವ ವೆಲ್‌ನೆಸ್ ಸೆಂಟರ್ ಸಾರ್ವಜನಿಕ ಸೇವಗೆ ಸಿದ್ಧಗೊಂಡಿದ್ದು, ಶೀಘ್ರವೆ ಜನಪ್ರತಿನಿಧಿಗಳಿಂದ ಉದ್ಘಾಟನೆ ಮಾಡಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ತಿಳಿಸಿದರು.

ಬುಧವಾರ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಿನನಿತ್ಯ ಕ್ರೀಡಾಂಗಣಕ್ಕೆ ಬರುವ ಸಾರ್ವಜನಿಕರ ಮತ್ತು ಕ್ರೀಡಾಳುಗಳ ಆರೋಗ್ಯದ ಹಿತದೃಷ್ಠಿಯಿಂದ ಮತ್ತು ಉತ್ತಮ ಆರೋಗ್ಯಕ್ಕೆ ಪೂರಕವಾಗಿರುವ ವೆಲ್‌ನೆಸ್ ಸೆಂಟರ್ ಇಲ್ಲಿ ಸ್ಥಾಪಿಸಲಾಗಿದೆ. ಜಾಕುಜಿ ಸ್ಪಾ ಮತ್ತು ಸ್ಟೀಂ ಸೌನಾ  ( jacuzzi spa & steam sauna) ಇದು ಒಳಗೊಂಡಿರುತ್ತದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಉಪಯೋಗಿಸಲು ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ಪ್ರತಿ ಗಂಟೆಗೆ ೧೦೦ ರೂ. ಗಳಂತೆ ಪಾವತಿಸಿ ಬಳಸಲು ಅವಕಾಶ ನೀಡಲಾಗುತ್ತದೆ. ಇದಲ್ಲದೆ ಮಾಸಿಕ ೧೨೦೦ ರೂ. ಮತ್ತು ವಾರ್ಷಿಕ ೧೨೦೦೦ ರೂ. ಒಮ್ಮೆಲೆ ಪಾವತಿಸಿ ಬಳಸಬಹುದಾಗಿದೆ ಎಂದರು.

೧೬ ವಯಸ್ಸಿನ ಒಳಗಿನ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಕ್ರೀಡಾಪಟುಗಳು ಮತ್ತು ಹಿರಿಯ ನಾಗರಿಕರಿಗೆ ಶುಲ್ಕದಲ್ಲಿ ಶೇ.೫೦ರಷ್ಟು ರಿಯಾಯಿತಿ ನೀಡಲಾಗುವುದು. ಆರಂಭದಲ್ಲಿ ೫೦ ರೂ. ಪ್ರತ್ಯೇಕವಾಗಿ ಪಾವತಿಸಿ ವೆಲ್‌ನೆಸ್ ಸೆಂಟರ್ ಪ್ರವೇಶಕ್ಕೆ ಗುರುತಿನ ಚೀಟಿ ಪಡೆಯುವುದು ಕಡ್ಡಾಯ ಎಂದರು.

ಕ್ರೀಡಾಂಗಣದಲ್ಲಿ ಸ್ಕೇಟಿಂಗ್ ರಿಂಕ್, ಖೋ-ಖೋ, ಕಬ್ಬಡಿ ಮೈದಾನದ ಅಭಿವೃದ್ಧಿಗೆ ಹೈ.ಕ.ಮಂಡಳಿಯಿಂದ ೧.೩೮ ಕೋಟಿ ರೂ. ಅನುದಾನ ನೀಡಲಾಗಿದ್ದು, ಶೀಘ್ರದಲ್ಲಿಯೆ ಕಾಮಗಾರಿ ಶುರುವಾಗಲಿದೆ. ಇದಲ್ಲದೆ ಬಾಕ್ಸಿಂಗ್, ಜುಡೋ ಮತ್ತು ರೆಸ್ಟ್‌ಲಿಂಗ್ ಕ್ರೀಡಾ ಪಟುಗಳ ಅಭ್ಯಾಸಕ್ಕಾಗಿ ೬೨ ಲಕ್ಷ ರೂ. ವೆಚ್ಚದಲ್ಲಿ ಜುಡೊ ಹಾಲ್ ಕೂಡ ನಿರ್ಮಿಸಲಾಗುತ್ತಿದ್ದು, ಅದರ ಕಾಮಗಾರಿಯೂ ಶೀಘ್ರದಲ್ಲಿಯೆ ಪ್ರಾರಂಭಗೊಳ್ಳಲಿದೆ ಎಂದರು.
ಒಟ್ಟಾರೆ ಚಂಪಾ ಕ್ರಿಡಾಂಗಣದಲ್ಲಿ ಸಾರ್ವಜನಿಕರು ಮ್ತತು ಕ್ರೀಡಾಪಟುಗಳಿಗೆ ಅನುಕೂಲವಾಗಲೆಂದು ಮತ್ತು ಕ್ರೀಡಾ ಸ್ನೇಹಿ ವಾತಾವರಣ ನಿರ್ಮಿಸಲು ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಹೈ.ಕ.ಮಂಡಳಿ ಹೆಚ್ಚಿನ ಒತ್ತು ನೀಡಿದೆ ಎಂದು ಪ್ರಾದೇಶಿಕ ಆಯುಕ್ತರು ಕ್ರೀಡಾಪಟುಗಳಿಗೆ ತರಬೇತಿ ನೀಡಲು ಕ್ರೀಡಾ ತರಬೇತುದಾರರ ನೇಮಕಾತಿಗೂ ಚಾಲನೆ ನೀಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಹೈ.ಕ.ಮಂಡಳಿ ಸೇರಿದಂತೆ ವಿವಿಧ ಅನುದಾನದಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ರಾಜಾ ಪಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿಂದ್ರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಭೀಮರಾವ ಬಿರಾದರ, ಕೆ.ಆರ್.ಐ.ಡಿ.ಎಲ್. ಇಂಜಿನೀಯರ್ ಸುಭಾಷ, ಪಿ.ಆರ್.ಇ.ಡಿ. ಇಂಜಿನೀಯರ್ ಚಂದ್ರಶೇಖರ ಮೋತಕಪಲ್ಲಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

10 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

13 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

18 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

18 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

20 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420