ವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ನ ಯುದ್ಧೋತ್ಸಾಹಕ್ಕೆ ಕಡಿವಾಣ ಹಾಕಲು ತಕ್ಷಣ ಮಧ್ಯಪ್ರವೇಶಿಸಿ ಯುದ್ಧದ ಪರಿಸ್ಥಿತಿಯನ್ನು ಶಮನಗೊಳಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಎಸ್ಡಿಪಿಐ, ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿಯವರಿಗೆ ಹಾಗೂ ಇಸ್ಲಾಮಿಕ್ ಸಹಕಾರ ಸಂಘಟನೆ-ಒಐಸಿಯ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಇಸ್ರೇಲ್ ಪೊಲೀಸರ ಸಹಾಯದಿಂದ ಅಕ್ರಮ ವಸಾಹತುಗಾರರು ಜೆರುಸಲೆಮ್ ನ ಶೇಖ್ ಜರ್ರಾದಲ್ಲಿರುವ ಫೆಲೆಸ್ತೀನ್ ನಿವಾಸಿಗಳನ್ನು ಹೊರಹಾಕಲು ಪ್ರಯತ್ನಿಸಿದ ಪರಿಣಾಮ ಈ ಪ್ರದೇಶದಲ್ಲಿ ಪ್ರಸ್ತುತ ಈ ಬಿಕ್ಕಟ್ಟು ಸೃಷ್ಟಿಯಾಗಿದೆ. ಫೆಲೆಸ್ತೀನ್ ಜನರನ್ನು ಅವರ ನಿವಾಸಗಳಿಂದ ಹೊರದಬ್ಬುವ ಕೃತ್ಯವು “ಯುದ್ಧಾಪರಾಧ” ಎಂದು ಸ್ವತಃ ವಿಶ್ವಸಂಸ್ಥೆ ಕೂಡ ಎಚ್ಚರಿಸಿದೆ. ದೌರ್ಜನ್ಯದ ಮುಂದುವರಿದ ಭಾಗವಾಗಿ, ಇಸ್ರೇಲ್ ಪೊಲೀಸರು ಪವಿತ್ರ ರಮಝಾನ್ ತಿಂಗಳ ಕೊನೆಯ ಶುಕ್ರವಾರದಂದು ಅಕ್ಸಾ ಮಸೀದಿಯಲ್ಲಿ ನೆರೆದಿದ್ದ ಫೆಲೆಸ್ತೀನಿಯನ್ನರ ಮೇಲೆ ರಬ್ಬರ್ ಗುಂಡಿನ ದಾಳಿ ನಡೆಸಿದ್ದಾರೆ.
ಈ ಹಿಂಸಾಚಾರಕ್ಕೆ ಹಮಾಸ್ ಕೂಡ ಪ್ರತೀಕಾರ ತೀರಿಸಿಕೊಂಡಿದೆ. ಈ ವೇಳೆ ಇಸ್ರೇಲ್ ಗಾಝಾ ಮೇಲೆ ಬಾಂಬ್ ಗಳ ಸುರಿಮಳೆಗೈಯ್ಯಲು ಪ್ರಾರಂಭಿಸಿದೆ. ಪರಿಣಾಮ ನೂರಾರು ಫೆಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇಸ್ರೇಲ್ ನ ಹತ್ಯಾಕಾಂಡವನ್ನು ಕೊನೆಗೊಳಿಸಲು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ಎಸ್ಡಿಪಿಐ ಮನವಿ ಮಾಡಿದೆ.
“ಇಸ್ರೇಲ್ ನ ನಿರಂತರ ದೌರ್ಜನ್ಯದಲ್ಲಿ ಅನೇಕ ಜೀವಹಾನಿಯಾಗಿದೆ ಮತ್ತು ಅಂತಾರಾಷ್ಟ್ರೀಯ ಸಮುದಾಯವು ಈ ವಿಷಯದಲ್ಲಿ ತಕ್ಷಣ ಮಧ್ಯಪ್ರವೇಶಿಸದಿದ್ದರೆ ಇಸ್ರೇಲ್ ಎಂದಿಗೂ ತನ್ನ ಜನಾಂಗೀಯ ನೀತಿಗಳನ್ನು ಕೊನೆಗೊಳಿಸುವುದಿಲ್ಲ. ಈ ನೀತಿಗೆ ಕಡಿವಾಣ ಹಾಕಬೇಕು ಮತ್ತು ಫೆಲೆಸ್ತೀನ್ ಜನರಿಗೆ ನ್ಯಾಯ ಮತ್ತು ಶಾಂತಿ ಸಿಗುವಂತೆ ಖಾತರಿಪಡಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…