ಕಲಬುರಗಿ: ನಗರದ ಜಗತ್ ಸರ್ಕಲ್ ಹತ್ತಿರ ದಲಿತ ಮತ್ತು ಮಸ್ಲಿಂರ ಮೇಲೆ ಹಲ್ಲೆ ಹಾಗೂ ಕೊಲೆ ಪ್ರಕರಣ ಖಂಡಿಸಿ, ದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಗೆ ಆಗ್ರಹಿಸಿ ಪ್ರಾಂತ್ಯ ರೈತ ಸಂಘ ಸೇರಿದಂತೆ ವಿವಿಧ ಜನಪರ ಸಂಘಟನೆಗಳಿಂದ ಕ್ಯಾಂಡಲ್ ಮಾರ್ಚ್ ನಡೆಸಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಮಾರುತಿ ಮಾನ್ಪಡೆ ಮಾತನಾಡಿ, ಮಾನವೀಯತೆ ರಕ್ಷಣೆಗಾಗಿ ಕೇಂದ್ರ ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಧರ್ಮದ ಹೆಸರಲ್ಲಿ ಕೋಮುವಾದಿಗಳು ಹಾದಿ ಬೀದಿಯಲ್ಲಿ ಕೊಲ್ಲುವದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.
ಜನ ಸಾಮಾನ್ಯರಿಗೆ ಶಾಂತಿಯುತವಾಗಿ ಬದುಕುವ ಹಕ್ಕು ಸಂವಿಧಾನ ಪ್ರತಿಯೊಬ್ಬ ಪ್ರಜೆಗೆ ನೀಡಿದೆ ಸರಕಾರ ಸಂವಿಧಾನದ ಹಕ್ಕನ್ನು ಜಾರಿಗೆ ತರುವ ಮೂಲಕ ದಲಿತ ಹಾಗೂ ಮುಸ್ಲಿಂ ಹಲ್ಲೆ ಹಾಗೂ ಕೊಲೆಗಳನ್ನು ನಿಲ್ಲಿಸಿಬೇಂದು ಕೇಂದ್ರ ಸರಕಾರಕ್ಕೆ ಆಗ್ರಹಿಸಿದರು.
ಮೊಂಬತ್ತಿ ಬೆಳಕಿನ ಪ್ರತಿಭಟನೆಯಲ್ಲಿ ಸುಲಫಲ ಮಠ ಹಾಗೂ ಶ್ರೀ ಸ್ವಾಮೀಜಿ ಶ್ರೀ ಶೈಲಂ ಪಿಠದ ಜಗದ್ಗುರು ಸಾರಂಗಧರ ದೇಸಿಕೇಂದ್ರ ಸ್ವಾಮೀಜಿ, ಮುಂತಾದ ಮಠಾಧೀಶರು, ಫಾದರ್ ಶೆಂಟ್ರಲ್ ಇನ್ವರ್ ಸೆಂಟ್, ಸ್ಟೇಟ್ ಇನ್ವರ್ ಸಿಟ,ಅಡವಕೇಟ್ ವಾಹಜ್ ಬಾಬಾ, ಮಮಶೆಟ್ಟಿ ಶರಣಬಸಪ್ಪ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಹಾಗೂ ಜನ ಸಾಮಾನ್ಯರು ಪ್ರತಿಭಟನೆಯಲ್ಲಿ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…