ಡೆಂಗ್ಯೂ ಕಾಯಿಲೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಿ

0
76

ಕಲಬುರಗಿ: ತೀರ್ವ ಜ್ವರ, ವಿಪರೀತ ತಲೆನೋವು, ಕಣ್ಣು, ಕೀಲು ನೋವು, ಬಾಯಿ, ವಸಡು, ಮೂಗಿನಿಂದ ರಕ್ತಸ್ರಾವವಾಗುವುದು, ಚರ್ಮದ ಮೇಲೆ ಅಲ್ಲಲ್ಲಿ ರಕ್ತದ ಗುರುತುಗಳು ಕಂಡುಬಂದರೆ ಇವು ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ಆಗ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಡು ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಆರೋಗ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಸಲಹೆ ನೀಡಿದ್ದಾರೆ.

ನಗರದ ಶೇಖರೋಜಾದಲ್ಲಿರುವ ಶಹಬಜಾರ ’ನಗರ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ಸರಳವಾಗಿ ಜರುಗಿದ ’ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಈಗಾಗಲೇ ಕರೋನಾ ಹಾವಳಿಗೆ ವಿಶ್ವ ತತ್ತರಿಸಿ ಹೋಗಿದೆ. ಇನ್ನೂ ಕೆಲವು ದಿವಸಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಡೆಂಗ್ಯೂ ಕಾಯಿಲೆಯ ಪ್ರಕರಣಗಳು ಕೂಡಾ ಕಂಡುಬರುತ್ತವೆ. ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ಇದ್ದಕಿದ್ದಂತೆ ಮಳೆಗಾಲ ಪ್ರಾರಂಭವಾದರೆ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಜ್ವರ ಕಂಡುಬರುತ್ತದೆ. ಈಡಿಸ್ ಇಜಿಪ್ಟೀ ಎಂಬ ಸೊಳ್ಳೆಯಿಂದ ಉತ್ಪತ್ತಿಯಾಗಿ, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ ಮತ್ತು ಹಗಲಿನ ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ. ಆದ್ದರಿಂದ ಸೊಳ್ಳೆಗಳ ಪರದೆಯನ್ನು ಬಳಸಬೇಕು.

ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ನೋಡಿಕೊಂಡು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸೊಳ್ಳೆಗಳ ನಿಯಂತ್ರಣ ರೋಗ ಹತೋಟಿಯ ಪ್ರಮುಖ ಕ್ರಮವಾಗಿದೆ. ನೀರು ಸಂಗ್ರಹಿಸುವ ತೊಟ್ಟಿಯನ್ನು ಆಗಾಗ್ಗೆ ತೊಳೆಯಬೇಕು. ಬಯಲಿನಲ್ಲಿ ಕಂಡುಬರುವ ತ್ಯಾಜ್ಯಗಳಾದ ಟಯರ್, ಎಳೆ ನೀರಿನ ಚಿಪ್ಪು, ಒಡೆದ ಬಾಟಲಿಯಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಿ, ಅವುಗಳನ್ನು ಸೂಕ್ತ ವಿಲೇವಾರಿ ಮಾಡುವಂತಹ ಅನೇಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಗ್ಯೂ ಜ್ವರವನ್ನು ಬರದಂತೆ ತಡೆಯಬಹುದಾಗಿದೆಯೆಂದು ತಿಳಿಸಿದರು.

ಪ್ರಮುಖರಾದ ಎಚ್.ಬಿ.ಪಾಟೀಲ, ಸುನೀಲಕುಮಾರ ವಂಟಿ, ನರಸಪ್ಪ ಬಿರಾದಾರ ದೇಗಾಂವ, ಅಣ್ಣಾರಾಯ ಎಚ್.ಮಂಗಾಣೆ, ರಾಜಕುಮಾರ ಬಟಗೇರಿ, ಜಗನಾಥ ಗುತ್ತೇದಾರ, ಗಂಗಾಜ್ಯೋತಿ ಗಂಜಿ, ಮಂಗಲಾ ಚಂದಾಪೂರೆ, ರೇಷ್ಮಾ ಆರ್.ನಕ್ಕುಂದಿ, ಮಕ್ಬುಲ್ ನವಾಜ್, ಸಾವಿತ್ರಿ ಸಿಂಧೆ, ಪ್ರಭುಗೌಡ ಮಾಡಗಿ, ಸಿದ್ದೋದನ್ ಗಾಯಕವಾಡ, ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here