ಕಲಬುರಗಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ಅಭಿವೃದ್ಧಿಪಡಿಸಿರುವ ಕೋವಿಡ್ ವಿರುದ್ಧ ರೋಗಿಗಳಿಗೆ ನೀಡುವ ಔಷಧಿ 2 ಡಿಯಾಕ್ಸಿ-ಡಿ-ಗ್ಲೂಕೋಸ್ ನ್ನು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ರವರು ಬಿಡುಗಡೆ ಮಾಡಿರುವುದು ಇಂತಹ ಸಂಕಷ್ಟ ಸಮಯದಲ್ಲಿ ದೇಶದ ಜನರಿಗೆ ಹೊಸ ಭರವಸೆ ಮುಡಿಸಿದೆ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಡಿಆರ್ ಡಿಒ ಮೂಲಕ ಮೊದಲ ದೇಶೀಯ ಸಂಶೋಧನಾ ಆಧಾರಿತ ಔಷಧಿಯನ್ನು ಕೋವಿಡ್ ವಿರುದ್ಧ ಚಿಕಿತ್ಸೆ ನೀಡಲು ಅಭಿವೃದ್ಧಿಪಡಿಸಲಾಗಿದೆ. ಕೋವಿಡ್ ಸೋಂಕಿನಿಂದ ಶೀಘ್ರ ಗುಣಮುಖ ಹೊಂದಲು ಮತ್ತು ಆಕ್ಸಿಜನ್ ಮೇಲೆ ಹೆಚ್ಚು ಅವಲಂಬನೆಯನ್ನು ಈ ಔಷಧಿ ಕಡಿಮೆ ಮಾಡಲಿದೆ.
ಇನ್ನು ಆಕ್ಸಿಜನ್ ಉತ್ಪಾದನೆ ಘಟಕ ಮತ್ತು ಕೋವಿಡ ಆರ್ ಟಿ ಪಿ ಸಿ ಆರ್ ಟೆಸ್ಟ್ ನ ನಿಖರತೆ ತಿಳಿಯಲು ಅಭಿವೃದ್ಧಿ ಪಡಿಸಿರುವ ಕಿಟಗಳು ಹಾಗೂ ಕೋರೊನಾ ರೋಗಿಗಳಿಗಾಗಿ ಆಕ್ಸಿಜನಯುಕ್ತ ಹಾಸಿಗೆಗಳನ್ನು ನಿರ್ಮಾಣ ಮಾಡುತ್ತಿರುವುದು DRDO ಸಂಸ್ಥೆ ಹಾಗೂ ಅದರ ಎಲ್ಲಾ ವಿಜ್ಞಾನಿಗಳ ಶ್ರಮ ದೇಶವೇ ಮೆಚ್ಚುವಂತಹದ್ದಾಗಿದೆ .ಇದು ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಫಲಕಾರಿಯಾಗಲಿದೆ ಎಂದು ಅಂಬಾರಾಯ ಅಷ್ಠಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…