ಕೋವಿಡ್ ಕರ್ಫ್ಯೂ ಹಿನ್ನೆಲೆ: ಸಂಚಾರಿ ಹಣ್ಣು, ತರಕಾರಿ ಮಾರಾಟ ವಾಹನಕ್ಕೆ ಚಾಲನೆ

ಕಲಬುರಗಿ: ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಜಿಲ್ಲಾ ಹಾಪಕಾಮ್ಸ್ ಸಂಸ್ಥೆಯು ರೈತರಿಂದ ನೇರವಾಗಿ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಮಾರುಕಟ್ಟೆಕ್ಕಿಂತ ಕಡಿಮೆ ಬೆಲೆಯಲ್ಲಿ ಗ್ರಾಹಕರಿಕೆ ಒದಗಿಸಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದಿಂದ (ಐಐಹೆಚ್‌ಆರ್ (IIಊಖ) ಸಂಸ್ಥೆಯಿಂದ) ವಿನ್ಯಾಸಗೊಳಿಸಿದ ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನಕ್ಕೆ ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ಕಲಬುರಗಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕ ಮಂಜುನಾಥ ನಾರಾಯಣಪೂರ, ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕ ಪ್ರಭುರಾಜ್ ಹೆಚ್.ಎಸ್., ಅಧ್ಯಕ್ಷ ಗುರುಶಾಂತ ಪಾಟೀಲ್, ಕಲಬುರಗಿ ಮತ್ತು ಯಾದಗಿರಿ ಕೆ.ಹೆಚ್.ಎಫ್ (ಏಊಈ) ಜಿಲ್ಲಾ ಪ್ರತಿನಿಧಿ ಹಾಗೂ ನಿರ್ದೇಶಕರಾದ ಬಸವರಾಜ ಪಾಟೀಲ ಊಡಗಿ, ಕಲಬುರಗಿ ಜಿಲ್ಲಾ ಹಾಪಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಪರಮೇಶ್ವರ ಶಿಖರೆ ಅವರು ಈ ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಸುಭಾ? ಭುವಿ, ಬಸವರಾಜ ಐ.ಕೆ, ಬಾಬುರಾವ ಗೊಬ್ಬೂರ ಹಾಗೂ ಇತರೆ ನಿರ್ದೇಶಕರು ಉಪಸ್ಥಿತರಿದ್ದರು.

ಕಲಬುರಗಿ ಜಿಲ್ಲೆಯ ರೈತರಿಗೆ ಒಳ್ಳೆಯ ಬೆಲೆ ನೀಡಿ ರೈತರಿಂದ ನೇರವಾಗಿ ರೈತರಿಂದ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಈ ಸಂಚಾರಿ ವಾಹನಗಳ ಮೂಲಕ ವಿವಿಧಡೆ ತೆರಳಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಅನುಕೂಲವಾಗುವಂತೆ ಈ ವಿನ್ಯಾಸಗೊಳಿಸಿದ ವಾಹನ ಜೊತೆಗೆ ಇನ್ನೂ ಮೂರು ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನಗಳಿಗೆ ಚಾಲನೆ ನೀಡಲಾಯಿತು.

ಈ ಸಂಚಾರಿ ವಾಹನವನ್ನು ಬೆಂಗಳೂರಿನ ಹೆಸರಘಟ್ಟ ಐಐಹೆಚ್‌ಆರ್ (IIಊಖ) ಸಂಸ್ಥೆಯು ವಿನ್ಯಾಸಗೊಳಿಸಿದ್ದು, ಇದರಲ್ಲಿ ಸೋಲಾರ ಪ್ಯಾನಲ್, ದರಪಟ್ಟಿ ಪ್ರದರ್ಶನೆಗಾಗಿ ಐಇಆ, ಒisಣ ಃಟoತಿeಡಿ ವುಳ್ಳ ಹಾಗೂ ಇತರೆ ಸುಸಜ್ಜಿತಹೊಸ ತಂತ್ರಜ್ಞಾನವುದ ವ್ಯವಸ್ಥೆ ಇರುತ್ತದೆ. ಈ ಸಂಚಾರಿ ವಾಹನವನ್ನು ಬೆಂಗಳೂರಿನ (ಕೆ.ಹೆಚ್.ಎಫ್) ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳಿ (ನಿ)ಯು ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಹಾಪ್‌ಕಾಮ್ಸ್ ಸಂಘಕ್ಕೆ ನೀಡಿದೆ.

ಕಳೆದ ವ? ಕೋವಿಡ್-೧೯ ಮೊದಲನೇ ಅಲೆಯ ಲಾಕ್ ಡೌನ್ ಸಂದರ್ಭದಲ್ಲಿ ಸಹ ಸಂಚಾರಿ ವಾಹನಗಳ ಮೂಲಕ ವಿವಿಧಡೆ ತೆರಳಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಿ ಜನರಿಗೆ ಅನುಕೂಲ ಕಲ್ಪಿಸಲಾಗಿತ್ತು.

ನಗರದ ಸಾರ್ವಜನಿಕರು ಈ ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನದಿಂದ ಮಾರುಕಟ್ಟೆಕ್ಕಿಂತ ಕಡಿಮೆ ಬೆಲೆಯಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಹಾಪಕಾಮ್ಸ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

12 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420