ಚಿತ್ತಾಪುರ: ತಾಲ್ಲೂಕಿನ ಕದ್ದರಗಿ ಮತ್ತು ಲಕ್ಷ್ಮಿಪುರ ವಾಡಿ (ಗಾಂಧಿನಗರ) ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಣೆ ಮಾಡಿಕೊಂಡಿರುವ ಮಾಹಿತಿಯ ಮೇರೆಗೆ ಸೇಡಂ ಸಹಾಯಕ ಆಯುಕ್ತ ವೀರಮಲ್ಲಪ್ಪ ಪೂಜಾರ್ ನೇತೃತ್ವದ ಅಧಿಕಾರಿಗಳ ತಂಡ ಬುಧವಾರ ಹಠಾಥ್ ದಾಳಿ ಮಾಡಿ ಅಕ್ರಮವಾಗಿ ಕೂಡಿಟ್ಟ ಸುಮಾರು 35 ಟಿಪ್ಪರನಷ್ಟು ಮರಳನ್ನು ವಶಕ್ಕೆ ಪಡೆದಿದೆ.
ಕದ್ದರಗಿ ಗ್ರಾಮದ ಕಾಗಿಣಾ ನದಿಯ ದಂಡೆಯ ಮೇಲೆ ಕೂಡಿಟ್ಟ 20 ಟಿಪ್ಪರ್ ಮತ್ತು ಲಕ್ಣ್ಮೀಪುರ ವಾಡಿ (ಗಾಂಧಿನಗರ)ಯ ಖಾಸಗಿ ಜಮೀನಿನಲ್ಲಿ ಸಂಗ್ರಹಿಸಿದ 15 ಟಿಪ್ಪರ್ ನಷ್ಟು ಅಕ್ರಮ ಮರಳು ಪತ್ತೆ ಹಚ್ಚಿ ತನ್ನ ವಶಕ್ಕೆ ಪಡೆದುಕೊಂಡಿದೆ. ಜೊತೆಗೆ 20 ಟ್ಯಾಕ್ಟರ್ ಸಹ ವಶಕ್ಕೆ ಪಡೆಯುವ ಮೂಲಕ ಅಕ್ರಮ ದಂಧೆಕೋರರ ವಿರುದ್ಧ ಕಾನೂನು ಸಮರ ಸಾರಿದೆ.
ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮ ಮರಳು ಸಂಗ್ರಹಣೆ ಮಾಡಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕದ್ದರಗಿ ಗ್ರಾಮ ಲೆಕ್ಕಿಗ ಬಸವರಾಜಪ್ಪ ವೀರಭದ್ರಪ್ಪ ಹೂಗಾರ ಅವರು ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ಈ ಸಂದರ್ಭದಲ್ಲಿ ಚಿತಾಪುರ ತಹಶೀಲ್ದಾರ್ ಉಮಾಕಾಂತ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಸ್ಥಳೀಯ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…