ನಿಂತಿರುವ ಲಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರ ಯುವಕರ ಸಾವು

0
111

ಯಾದಗಿರಿ : ನಿಂತಿರುವ ಲಾರಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ತಾಲ್ಲೂಕಿನ ಗುಂಡಗುರ್ತಿ ಹಾಗೂ ಅನವಾರ ಮಾರ್ಗದ ಮಧ್ಯೆ ಜರುಗಿದೆ.

ಬಾಲಾಜಿ ತಂದೆ ಸೇಮುಸಪ್ಪ(25) ಹಾಗೂ ದೇವು ತಂದೆ ಚಂದ್ರಮು (23) ದಳಪತಿ ಎಂಬ ಇಬ್ಬರು ಯುವಕರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ ಸುರಪುರ ಶಹಾಪುರ ತಾಲೂಕಿನ ಗ್ರಾಮದವರು ಎಂದು ಹೇಳಲಾಗುತ್ತಿದೆ.

Contact Your\'s Advertisement; 9902492681

ರಾತ್ರಿ 9 ರ ಸುಮಾರಿಗೆ ಗುಂಡಗುತಿ೯ ಯಿಂದ ಅನವಾರ ಗ್ರಾಮಕ್ಕೆ ತೆರಳುತ್ತಿರುವಾಗ ನಿಂತಿರುವ ಲಾರಿಯೊಂದಕ್ಕೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರ ಯುವಕರ ತಲೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ಹೆಚ್ಚು ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಶಹಾಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here