ಬಿಸಿ ಬಿಸಿ ಸುದ್ದಿ

ಜಾನಪದ ಕಲಾವಿದರ ಮಾಶಾಸನ ಬಿಡುಗಡೆಗೆ ಭಕರೆ ಆಗ್ರಹ

ಕಲಬುರಗಿ : ಕಲೆಯನ್ನು ನಂಬಿ ಬದುಕು ಸಾಗಿಸುತ್ತಿರುವ ಜಾನಪದ ಕಲಾವಿದರಿಗೆ ಕಳೆದ ಫೆಬ್ರವರಿ ತಿಂಗಳಿನಿಂದ ಮಾಶಾಸನ ಬಾರದೆ ಕರೋನಾ ಮಹಾಮಾರಿಯ ಸಂಕಷ್ಟ ಕಾಲದಲ್ಲಿ ಕಲಾವಿದರ ಕುಟುಂಬ ಆಪತ್ತಿಗೊಳಗಾಗಿದ್ದರಿಂದ ಅಲ್ಪ ಮಟ್ಟಿಗಾದರೂ ಮಾಶಾಸನ ಸಿಗುವಂತಾದರೆ ಕೊಂಚ ನೆಮ್ಮದಿಂದಿರಬಹುದು. ಅದಕ್ಕಾಗಿ ಕೂಡಲೇ ಸರ್ಕಾರ ಹಣ ಬಿಡುಗಡೆ ಮಾಡಬೇಕೆಂದು ಕಲಬುರಗಿ ಕ.ಸಾ.ಪ. ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ವಿಶ್ವನಾಥ ಭಕರೆ ಆಗ್ರಹಿಸಿದ್ದಾರೆ.

ಬಡ ಜಾನಪದ ಕಲಾವಿದರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಶಾಸನ ಬರುತ್ತಿತ್ತು . ಸರ್ಕಾರಿ ಖಜಾನೆಯಿಂದ ಬರುತ್ತಿದ್ದ ಮಾಶಾಸನ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಂಜೂರಾತಿ ವರ್ಗಾವಣೆಯಾಗಿರುವ ಪ್ರಯುಕ್ತ ಸರಿಯಾದ ಸಮಯಕ್ಕೆ ಮಾಶಾಸನ ಬಾರದೆ ಕಲಾವಿದರ ಅಲ್ಪ ಸಹಾಯಕ್ಕೆ ಕತ್ತರಿ ಹಾಕಿದಂತಾಗಿದೆಂದು ಅವರು ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ಎಲ್ಲೇಡೆ ಕರೋನಾ ಮಹಾಮಾರಿಯ ಹಾವಳಿಯಿಂದ ತತ್ತರಿಸಿ ಹೋದ ಕಲಾವಿದರ ಬಳಗಕ್ಕೆ ಎರಡನೇ ಅಲೆಯಿಂದ ಕಂಗೆಟ್ಟು ಹೋಗುವಂತಾಗಿದ್ದಾರೆ. ಕಲೆಯನ್ನೇ ನಂಬಿ ಬದುಕುವ ಇಂಥ ಬಡ ಕಲಾವಿದರಿಗೆ ಕರೋನಾ ಹಾವಳಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಭಕರೆಯವರು ಖೇದ ವ್ಯಕ್ತಪಡಿಸಿದ್ದಾರೆ.

ಕಲಾವಿದರ ಪರಿಸ್ಥಿತಿ ಅರಿತ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಸಿ.ಎಂ. ನರಸಿಂಹಮೂರ್ತಿಯವರು ಕೂಡ ಮಾಶಾಸನ ಬಿಡುಗಡೆಗಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ದಿನಗಳಲ್ಲಿ ಕಲಾವಿದರ ಸ್ಥಿತಿ ಚಿಂತಾಜನಕವಾಗಿದೆ. ಆದ್ದರಿಂದ ಈ ಕೂಡಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಮಾಶಾಸನ ಬಿಡುಗಡೆ ಮಾಡಬೇಕೆಂದು ಭಕರೆಯವರು ಮನವಿ ಮಾಡಿದ್ದಾರೆ.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

32 mins ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

2 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

15 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

15 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

17 hours ago